25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ , ರಾಷ್ಟ್ರೀಯ ಸೇವಾ ಯೋಜನೆ ಘಟಕ 1&2 , ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಇದರ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಇದರ ಅಂಗವಾಗಿ ಪುಂಜಾಲಕಟ್ಟೆ ಪಿಲಾತಬೆಟ್ಟು ಸಹಕಾರಿ ಸಂಘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರತಿ ವರ್ಷ ಭಾರತದಾದ್ಯಂತ ರಾಷ್ಟ್ರೀಯ ಸಹಕಾರ ಯೂನಿಯನ್, ನವದೆಹಲಿ ಇವರ ಮಾರ್ಗದರ್ಶನದಲ್ಲಿ ನ.14ರಿಂದ 20ರವೆಗೆ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ನಡೆದು ಬಂದಿದೆ. ನವೆಂಬರ್ 14 ಜವಾಹರ್ ಲಾಲ್ ನೆಹರೂ ಅವರ ಹುಟ್ಟು ಹಬ್ಬವಾಗಿದ್ದು, ನೆಹರೂ ಅವರು ಸಹಕಾರ ಚಳುವಳಿಯ ಬೆಳವಣಿಗೆಗೆ ನೀಡಿದ ಪ್ರೋತ್ಸಾಹಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಂಕೇತವಾಗಿ ಅವರ ಹುಟ್ಟು ಹಬ್ಬದಂದು ಸಪ್ತಾಹದ ಉದ್ಘಾಟನೆ ಮಾಡಲಾಯಿತು.

ರಾಷ್ಟ್ರ ರಾಜ್ಯ ಮಟ್ಟದಲ್ಲಿ ಈ ವಿಷಯಗಳ ಕುರಿತು ವಿಚಾರಗೋಷ್ಠಿಗಳು , ಚಿಂತನ ಮಂಥನ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಜನರಲ್ಲಿ ಸಹಕಾರದ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ಈ ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಮಹತ್ವ , ಒದಗಿಸಿ ಕೊಡುವ ಸೌಲಭ್ಯ ಹಾಗು ತತ್ವಗಳ ಕುರಿತಾಗಿ ಧರಣೇಂದ್ರ ಜೈನ್ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.


ಇತರೆ ಶಾಖೆಯ ಅಧ್ಯಕ್ಷರುಗಳಿಗೆ ಹಾಗೂ ಹೈನುಗಾರಿಕೆ ಮತ್ತು ಕೃಷಿಯಲ್ಲಿ ಉತ್ತಮ ಫಲಿತಾಂಶ ಹೊಂದಿದ ಕೃಷಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಿ.ಪಂ ಮಾಜಿ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ಉಪಸ್ಥಿತರಿದ್ದರು. ಸಹಕಾರಿ ಸಂಘದ ಕಾರ್ಯದರ್ಶಿ ಸ್ವಾಗತಿಸಿದರು.

Related posts

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya
error: Content is protected !!