23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

ಮಿತ್ತಬಾಗಿಲು: ಕಾಜೂರು ದರ್ಗಾ ಸಮಿತಿ ಅಧೀನದ ವಿದ್ಯಾ ಸಂಸ್ಥೆಗಳಾದ ರಾಹ ಪಬ್ಲಿಕ್ ಸ್ಕೂಲ್, ಹೈಸ್ಕೂಲ್, ಪಿಯುಸಿ ಮತ್ತು ಶರೀಅತ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರಖ್ಯಾತ ತರಬೇತುದಾರರಾದ ರಫೀಕ್ ಮಾಸ್ಟರ್ ರವರಿಂದ ವಿಶೇಷ ತರಬೇತಿ ಕಾರ್ಯಾಗಾರ ನ. 15 ರಂದು ಕಾಜೂರು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಯು. ಇಬ್ರಾಹಿಂ ರವರ ಅಧ್ಯಕ್ಷತೆಯಲ್ಲಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಕೆ ಎಂ ಸಿದ್ದೀಕ್ ಮೋಂಟುಗೋಳಿ ಉದ್ಘಾಟಿಸಿದರು.

ಸಂಸ್ಥೆಯಲ್ಲಿ 2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ನಿಶಾ ಹಾಗೂ ಮುಹಮ್ಮದ್ ಸುಹೈಬ್, ಪಿಯುಸಿಯಲ್ಲಿ ಖತೀಜಾ ಬರೀರಾ ಹಾಗೂ ಫೌಝಿಯಾರವರನ್ನು ಸನ್ಮಾನಿಸಲಾಯಿತು.
ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ದರ್ಗಾ ಸಮಿತಿ ಉಪಾಧ್ಯಕ್ಷರಾದ ಬದ್ರುದ್ದೀನ್, ಶಿಕ್ಷಣ ಸಂಸ್ಥೆಯ ಚೇರ್ಮೆನ್, ದರ್ಗಾ ಪ್ರದಾನ ಕಾರ್ಯದರ್ಶಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್, ಶಿಕ್ಷಣ ಸಂಸ್ಥೆಯ ಪ್ರತಿನಿಧಿಗಳಾದ ಆಸಿಫ್, ಶರೀಫ್ ಹೈಟೆಕ್, ಮುಸ್ತಫ ಡಿ ಎಚ್, ನವಾಝ್ ಎನ್.ಎಂ ಮತ್ತು ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಂಶಾದ್.ಎ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಮದ್ರಸ ಸದರ್ ಉಸ್ತಾದ್ ಜಮಾಲ್ ಲತೀಫಿ ದುಆ ನೆರವೇರಿಸಿದರು.
ಸಂಸ್ಥೆಯ ಅಧ್ಯಾಪಕರಾದ ಸ್ವಾದಿಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶರೀಅತ್ ಕಾಲೇಜು ಉಪ ಪ್ರಾಂಶುಪಾಲರಾದ ಅಬ್ದುರ್ರಹ್ಮಾನ್ ಸಅದಿ ವಂದಿಸಿದರು.

Related posts

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!