25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

ಸವಣಾಲು : ಇಲ್ಲಿಯ ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯನ್ನು ನ.12ರಂದು ರಾಧಾಕೃಷ್ಣ ಸಭಾಭವನದಲ್ಲಿ ಪ್ರಾರಂಭಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಉದ್ಘಾಟಿಸಿದರು. ಭಜನಾ ತರಬೇತಿದಾರರಾದ ಸಂದೇಶ ಮದ್ದಡ್ಕ ಭಾಗವಹಿಸಿ ಕುಣಿತ ಭಜನೆಯ ಮಹತ್ವವನ್ನು ವಿವರಿಸಿ ಎಲ್ಲರ ಸಹಕಾರವನ್ನು ಕೋರಿದರು. ಕುಣಿತ ಭಜನಾ ತರಬೇತಿಯ ಜವಾಬ್ದಾರಿಯನ್ನು ವಹಿಸಿದ ಫ ಲ್ಗುಣಿ ಮಹಿಳಾ ಮಂಡಲದ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಲಕ್ಷ್ಮಿ ಅನಿಸಿಕೆ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು.

ಸಮಾರಂಭದಲ್ಲಿ ಭಜನಾ ಮಂಡಳಿ ಉಪಾಧ್ಯಕ್ಷ ಪ್ರಭಾಕರ ಭಟ್ ಜಿ, ದಯಾನಂದ ಗೌಡ, ಪ್ರಕಾಶ್ , ಯೋಗೀಶ್ ಪಂಚಾಯಿತಿ ಸದಸ್ಯರಾದ ಶ್ರೀಮತಿ ಸುಮಲತಾ ಚಂದ್ರಶೇಖರ್ ಹಾಗೂ ಇದಕ್ಕೆ ಸಹಕರಿಸಿದ ಯೋಗೀಶ್ ಪುರಂದರ ಪೂಜಾರಿ ಸಂತೋಷ್ ಗೌಡ ಮತ್ತು ಫಲ್ಗುಣಿ ಮಹಿಳಾ ಮಂಡಲದ ಶ್ರೀಮತಿ ವೀಣಾ ಗಣೇಶ್ ಭಂಡಾರಿ, ಭಾರತಿ ಸತೀಶ್ ಶೆಟ್ಟಿ, ಸುಮಲತಾ ಜಯ ಶೆಟ್ಟಿ ಭಾಗವಹಿಸಿದರು. ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ ಸ್ವಾಗತಿಸಿ ನಿರೂಪಿಸಿದರು.

Related posts

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya
error: Content is protected !!