23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

ಸವಣಾಲು : ಇಲ್ಲಿಯ ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯನ್ನು ನ.12ರಂದು ರಾಧಾಕೃಷ್ಣ ಸಭಾಭವನದಲ್ಲಿ ಪ್ರಾರಂಭಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಉದ್ಘಾಟಿಸಿದರು. ಭಜನಾ ತರಬೇತಿದಾರರಾದ ಸಂದೇಶ ಮದ್ದಡ್ಕ ಭಾಗವಹಿಸಿ ಕುಣಿತ ಭಜನೆಯ ಮಹತ್ವವನ್ನು ವಿವರಿಸಿ ಎಲ್ಲರ ಸಹಕಾರವನ್ನು ಕೋರಿದರು. ಕುಣಿತ ಭಜನಾ ತರಬೇತಿಯ ಜವಾಬ್ದಾರಿಯನ್ನು ವಹಿಸಿದ ಫ ಲ್ಗುಣಿ ಮಹಿಳಾ ಮಂಡಲದ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಲಕ್ಷ್ಮಿ ಅನಿಸಿಕೆ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು.

ಸಮಾರಂಭದಲ್ಲಿ ಭಜನಾ ಮಂಡಳಿ ಉಪಾಧ್ಯಕ್ಷ ಪ್ರಭಾಕರ ಭಟ್ ಜಿ, ದಯಾನಂದ ಗೌಡ, ಪ್ರಕಾಶ್ , ಯೋಗೀಶ್ ಪಂಚಾಯಿತಿ ಸದಸ್ಯರಾದ ಶ್ರೀಮತಿ ಸುಮಲತಾ ಚಂದ್ರಶೇಖರ್ ಹಾಗೂ ಇದಕ್ಕೆ ಸಹಕರಿಸಿದ ಯೋಗೀಶ್ ಪುರಂದರ ಪೂಜಾರಿ ಸಂತೋಷ್ ಗೌಡ ಮತ್ತು ಫಲ್ಗುಣಿ ಮಹಿಳಾ ಮಂಡಲದ ಶ್ರೀಮತಿ ವೀಣಾ ಗಣೇಶ್ ಭಂಡಾರಿ, ಭಾರತಿ ಸತೀಶ್ ಶೆಟ್ಟಿ, ಸುಮಲತಾ ಜಯ ಶೆಟ್ಟಿ ಭಾಗವಹಿಸಿದರು. ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ ಸ್ವಾಗತಿಸಿ ನಿರೂಪಿಸಿದರು.

Related posts

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!