22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

ಸವಣಾಲು : ಇಲ್ಲಿಯ ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯನ್ನು ನ.12ರಂದು ರಾಧಾಕೃಷ್ಣ ಸಭಾಭವನದಲ್ಲಿ ಪ್ರಾರಂಭಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಉದ್ಘಾಟಿಸಿದರು. ಭಜನಾ ತರಬೇತಿದಾರರಾದ ಸಂದೇಶ ಮದ್ದಡ್ಕ ಭಾಗವಹಿಸಿ ಕುಣಿತ ಭಜನೆಯ ಮಹತ್ವವನ್ನು ವಿವರಿಸಿ ಎಲ್ಲರ ಸಹಕಾರವನ್ನು ಕೋರಿದರು. ಕುಣಿತ ಭಜನಾ ತರಬೇತಿಯ ಜವಾಬ್ದಾರಿಯನ್ನು ವಹಿಸಿದ ಫ ಲ್ಗುಣಿ ಮಹಿಳಾ ಮಂಡಲದ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಲಕ್ಷ್ಮಿ ಅನಿಸಿಕೆ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು.

ಸಮಾರಂಭದಲ್ಲಿ ಭಜನಾ ಮಂಡಳಿ ಉಪಾಧ್ಯಕ್ಷ ಪ್ರಭಾಕರ ಭಟ್ ಜಿ, ದಯಾನಂದ ಗೌಡ, ಪ್ರಕಾಶ್ , ಯೋಗೀಶ್ ಪಂಚಾಯಿತಿ ಸದಸ್ಯರಾದ ಶ್ರೀಮತಿ ಸುಮಲತಾ ಚಂದ್ರಶೇಖರ್ ಹಾಗೂ ಇದಕ್ಕೆ ಸಹಕರಿಸಿದ ಯೋಗೀಶ್ ಪುರಂದರ ಪೂಜಾರಿ ಸಂತೋಷ್ ಗೌಡ ಮತ್ತು ಫಲ್ಗುಣಿ ಮಹಿಳಾ ಮಂಡಲದ ಶ್ರೀಮತಿ ವೀಣಾ ಗಣೇಶ್ ಭಂಡಾರಿ, ಭಾರತಿ ಸತೀಶ್ ಶೆಟ್ಟಿ, ಸುಮಲತಾ ಜಯ ಶೆಟ್ಟಿ ಭಾಗವಹಿಸಿದರು. ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ ಸ್ವಾಗತಿಸಿ ನಿರೂಪಿಸಿದರು.

Related posts

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

“ಮನೆಗೊಂದು ಕೊಡೆ – ಮಮತೆಯ ಸ್ಪರ್ಶ” ಕಾರ್ಯಕ್ರಮದಡಿಯಲ್ಲಿ ಕೊಡೆಗಳ ವಿತರಣೆ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
error: Content is protected !!