23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

ಸವಣಾಲು : ಇಲ್ಲಿಯ ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯನ್ನು ನ.12ರಂದು ರಾಧಾಕೃಷ್ಣ ಸಭಾಭವನದಲ್ಲಿ ಪ್ರಾರಂಭಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಉದ್ಘಾಟಿಸಿದರು. ಭಜನಾ ತರಬೇತಿದಾರರಾದ ಸಂದೇಶ ಮದ್ದಡ್ಕ ಭಾಗವಹಿಸಿ ಕುಣಿತ ಭಜನೆಯ ಮಹತ್ವವನ್ನು ವಿವರಿಸಿ ಎಲ್ಲರ ಸಹಕಾರವನ್ನು ಕೋರಿದರು. ಕುಣಿತ ಭಜನಾ ತರಬೇತಿಯ ಜವಾಬ್ದಾರಿಯನ್ನು ವಹಿಸಿದ ಫ ಲ್ಗುಣಿ ಮಹಿಳಾ ಮಂಡಲದ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಲಕ್ಷ್ಮಿ ಅನಿಸಿಕೆ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು.

ಸಮಾರಂಭದಲ್ಲಿ ಭಜನಾ ಮಂಡಳಿ ಉಪಾಧ್ಯಕ್ಷ ಪ್ರಭಾಕರ ಭಟ್ ಜಿ, ದಯಾನಂದ ಗೌಡ, ಪ್ರಕಾಶ್ , ಯೋಗೀಶ್ ಪಂಚಾಯಿತಿ ಸದಸ್ಯರಾದ ಶ್ರೀಮತಿ ಸುಮಲತಾ ಚಂದ್ರಶೇಖರ್ ಹಾಗೂ ಇದಕ್ಕೆ ಸಹಕರಿಸಿದ ಯೋಗೀಶ್ ಪುರಂದರ ಪೂಜಾರಿ ಸಂತೋಷ್ ಗೌಡ ಮತ್ತು ಫಲ್ಗುಣಿ ಮಹಿಳಾ ಮಂಡಲದ ಶ್ರೀಮತಿ ವೀಣಾ ಗಣೇಶ್ ಭಂಡಾರಿ, ಭಾರತಿ ಸತೀಶ್ ಶೆಟ್ಟಿ, ಸುಮಲತಾ ಜಯ ಶೆಟ್ಟಿ ಭಾಗವಹಿಸಿದರು. ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ ಸ್ವಾಗತಿಸಿ ನಿರೂಪಿಸಿದರು.

Related posts

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!