32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

ಉಜಿರೆ: ಉಜಿರೆಯ ಕುಂಟಿನಿ ಎಸ್.ಸಿ ಕಾಲೊನಿಯಲ್ಲಿ 9ನೇ ವರ್ಷದ ದೀಪಾವಳಿಯನ್ನು ಸಾಮೂಹಿಕವಾಗಿ ನ.14 ರಂದು ಆಚರಿಸಲಾಯಿತು.
ಲಕ್ಷ್ಮಿ ಪೂಜೆಯನ್ನು ಡಾ| ಎಂ ಎಂ.ದಯಾಕರ್ ಭಟ್ ರವರು ನೆರವೇರಿಸಿ ಮಾತನಾಡಿ ಮಹಾಲಕ್ಷ್ಮಿ ಮಂತ್ರೋಪದೇಶವನ್ನು ಕಾಲನಿಯ ಸರ್ವರಿಗೂ ಹಿರಿಕಿರಿಯರೆನ್ನದೆ ನೀಡಲಾಯಿತು. ಮಹಾಲಕ್ಷ್ಮಿಯ ಅನುಗ್ರಹದಿಂದ ಜೀವನದಲ್ಲಿ ಸಂತಾನ ಸಂಪತ್ತು ಆರೋಗ್ಯ ಮತ್ತು ಸುಖ ಗಳಿಸಬಹುದು ಎಂದರು.


ಈ ಹಿಂದಿನ ವರ್ಷಗಳಲ್ಲಿ ಪ್ರತೀ ಮನೆಗೆ ನೀಡಿದ ತುಳಸಿಕಟ್ಟೆಯ ಅಲಂಕಾರ ಮತ್ತು ಬಲಿಂದ್ರ ಲೆಪ್ಪು ಇವುಗಳನ್ನೂ ತಮ್ಮ ಮನೆಗಳಲ್ಲಿ ನಿಷ್ಠೆಯಿಂದ ಆಚರಿಸುವಂತೆ ವಿವರಿಸಲಾಯಿತು.ಕಿರಿಯರೆಲ್ಲರೂ ತಮಗಿಂತ ಹಿರಿಯರ ಪಾದಗಳಿಗೆ ವಂದಿಸಿ ಆಶೀರ್ವಾದ ಪಡೆದರು. ಹಬ್ಬದ ಸಂಭ್ರಮ ಆಚರಣೆಗಾಗಿ ಕಾಲನಿಯ ಪ್ರತೀ ಮನೆಗಳಿಗೆ ಅಕ್ಕಿ, ಬೆಲ್ಲ, ಬೇಳೆ ,ತೆಂಗಿನಕಾಯಿ ಮತ್ತು ಪಟಾಕಿಗಳನ್ನು ವಿತರಿಸಲಾಯಿತು. ಸಮಸ್ತರೂ ಹಣತೆಗಳನ್ನು ಬೆಳಗಿ ಸುಡುಮದ್ದು ಸಿಡಿಸಿ ಸಂಭ್ರಮಿಸಿದರು.


ಮುಖ್ಯ ಅತಿಥಿಗಳಾಗಿ ಸಂಘದ ಉನ್ನತ ಅಧಿಕಾರಿಗಳಾದ ಶಿವಪ್ರಸಾದ್ ಮಲೇಬೆಟ್ಟು ರವರು ಆಗಮಿಸಿ ದೀಪಾವಳಿಯ ಮಹತ್ವ ವಿವರಿಸಿದರು ಮತ್ತು ಸಮಾಜದ ಎಲ್ಲಾ ವರ್ಗಗಳಿಗೂ ತಲುಪುವಂತೆ ಕಾರ್ಯಕ್ರಮ ಆಯೋಜಿಸುವುದು ಬಹಳ ಮುಖ್ಯ ಎಂದರು.
ಇನ್ನೋರ್ವ ಮುಖ ಅತಿಥಿ ಪೃಥ್ವಿರಾಜ್ ಶೆಟ್ಟಿ ಯವರು ಇಂತಹ ಕಾರ್ಯಕ್ರಮ ಆಯೋಜಿಸಿದವರು ಶ್ಲಾಘನೀಯರು ಎಂದರು .
ಕೃಷ್ಣಪ್ಪ ಉಪಸ್ಥಿತರಿದ್ದರು. ಆಗಮಿಸಿದ ಸರ್ವರಿಗೂ ರೋಟರಿ ಆನ್ಸ್ ಬೆಳ್ತಂಗಡಿ ಅಧ್ಯಕ್ಷೆ ಸಿಹಿತಿಂಡಿಗಳನ್ನು ವಿತರಿಸಿದರು.

Related posts

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಪಾಲೇದು ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!