23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

ಉಜಿರೆ: ಉಜಿರೆಯ ಕುಂಟಿನಿ ಎಸ್.ಸಿ ಕಾಲೊನಿಯಲ್ಲಿ 9ನೇ ವರ್ಷದ ದೀಪಾವಳಿಯನ್ನು ಸಾಮೂಹಿಕವಾಗಿ ನ.14 ರಂದು ಆಚರಿಸಲಾಯಿತು.
ಲಕ್ಷ್ಮಿ ಪೂಜೆಯನ್ನು ಡಾ| ಎಂ ಎಂ.ದಯಾಕರ್ ಭಟ್ ರವರು ನೆರವೇರಿಸಿ ಮಾತನಾಡಿ ಮಹಾಲಕ್ಷ್ಮಿ ಮಂತ್ರೋಪದೇಶವನ್ನು ಕಾಲನಿಯ ಸರ್ವರಿಗೂ ಹಿರಿಕಿರಿಯರೆನ್ನದೆ ನೀಡಲಾಯಿತು. ಮಹಾಲಕ್ಷ್ಮಿಯ ಅನುಗ್ರಹದಿಂದ ಜೀವನದಲ್ಲಿ ಸಂತಾನ ಸಂಪತ್ತು ಆರೋಗ್ಯ ಮತ್ತು ಸುಖ ಗಳಿಸಬಹುದು ಎಂದರು.


ಈ ಹಿಂದಿನ ವರ್ಷಗಳಲ್ಲಿ ಪ್ರತೀ ಮನೆಗೆ ನೀಡಿದ ತುಳಸಿಕಟ್ಟೆಯ ಅಲಂಕಾರ ಮತ್ತು ಬಲಿಂದ್ರ ಲೆಪ್ಪು ಇವುಗಳನ್ನೂ ತಮ್ಮ ಮನೆಗಳಲ್ಲಿ ನಿಷ್ಠೆಯಿಂದ ಆಚರಿಸುವಂತೆ ವಿವರಿಸಲಾಯಿತು.ಕಿರಿಯರೆಲ್ಲರೂ ತಮಗಿಂತ ಹಿರಿಯರ ಪಾದಗಳಿಗೆ ವಂದಿಸಿ ಆಶೀರ್ವಾದ ಪಡೆದರು. ಹಬ್ಬದ ಸಂಭ್ರಮ ಆಚರಣೆಗಾಗಿ ಕಾಲನಿಯ ಪ್ರತೀ ಮನೆಗಳಿಗೆ ಅಕ್ಕಿ, ಬೆಲ್ಲ, ಬೇಳೆ ,ತೆಂಗಿನಕಾಯಿ ಮತ್ತು ಪಟಾಕಿಗಳನ್ನು ವಿತರಿಸಲಾಯಿತು. ಸಮಸ್ತರೂ ಹಣತೆಗಳನ್ನು ಬೆಳಗಿ ಸುಡುಮದ್ದು ಸಿಡಿಸಿ ಸಂಭ್ರಮಿಸಿದರು.


ಮುಖ್ಯ ಅತಿಥಿಗಳಾಗಿ ಸಂಘದ ಉನ್ನತ ಅಧಿಕಾರಿಗಳಾದ ಶಿವಪ್ರಸಾದ್ ಮಲೇಬೆಟ್ಟು ರವರು ಆಗಮಿಸಿ ದೀಪಾವಳಿಯ ಮಹತ್ವ ವಿವರಿಸಿದರು ಮತ್ತು ಸಮಾಜದ ಎಲ್ಲಾ ವರ್ಗಗಳಿಗೂ ತಲುಪುವಂತೆ ಕಾರ್ಯಕ್ರಮ ಆಯೋಜಿಸುವುದು ಬಹಳ ಮುಖ್ಯ ಎಂದರು.
ಇನ್ನೋರ್ವ ಮುಖ ಅತಿಥಿ ಪೃಥ್ವಿರಾಜ್ ಶೆಟ್ಟಿ ಯವರು ಇಂತಹ ಕಾರ್ಯಕ್ರಮ ಆಯೋಜಿಸಿದವರು ಶ್ಲಾಘನೀಯರು ಎಂದರು .
ಕೃಷ್ಣಪ್ಪ ಉಪಸ್ಥಿತರಿದ್ದರು. ಆಗಮಿಸಿದ ಸರ್ವರಿಗೂ ರೋಟರಿ ಆನ್ಸ್ ಬೆಳ್ತಂಗಡಿ ಅಧ್ಯಕ್ಷೆ ಸಿಹಿತಿಂಡಿಗಳನ್ನು ವಿತರಿಸಿದರು.

Related posts

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya
error: Content is protected !!