23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

ಉಜಿರೆ: ಉಜಿರೆಯ ಕುಂಟಿನಿ ಎಸ್.ಸಿ ಕಾಲೊನಿಯಲ್ಲಿ 9ನೇ ವರ್ಷದ ದೀಪಾವಳಿಯನ್ನು ಸಾಮೂಹಿಕವಾಗಿ ನ.14 ರಂದು ಆಚರಿಸಲಾಯಿತು.
ಲಕ್ಷ್ಮಿ ಪೂಜೆಯನ್ನು ಡಾ| ಎಂ ಎಂ.ದಯಾಕರ್ ಭಟ್ ರವರು ನೆರವೇರಿಸಿ ಮಾತನಾಡಿ ಮಹಾಲಕ್ಷ್ಮಿ ಮಂತ್ರೋಪದೇಶವನ್ನು ಕಾಲನಿಯ ಸರ್ವರಿಗೂ ಹಿರಿಕಿರಿಯರೆನ್ನದೆ ನೀಡಲಾಯಿತು. ಮಹಾಲಕ್ಷ್ಮಿಯ ಅನುಗ್ರಹದಿಂದ ಜೀವನದಲ್ಲಿ ಸಂತಾನ ಸಂಪತ್ತು ಆರೋಗ್ಯ ಮತ್ತು ಸುಖ ಗಳಿಸಬಹುದು ಎಂದರು.


ಈ ಹಿಂದಿನ ವರ್ಷಗಳಲ್ಲಿ ಪ್ರತೀ ಮನೆಗೆ ನೀಡಿದ ತುಳಸಿಕಟ್ಟೆಯ ಅಲಂಕಾರ ಮತ್ತು ಬಲಿಂದ್ರ ಲೆಪ್ಪು ಇವುಗಳನ್ನೂ ತಮ್ಮ ಮನೆಗಳಲ್ಲಿ ನಿಷ್ಠೆಯಿಂದ ಆಚರಿಸುವಂತೆ ವಿವರಿಸಲಾಯಿತು.ಕಿರಿಯರೆಲ್ಲರೂ ತಮಗಿಂತ ಹಿರಿಯರ ಪಾದಗಳಿಗೆ ವಂದಿಸಿ ಆಶೀರ್ವಾದ ಪಡೆದರು. ಹಬ್ಬದ ಸಂಭ್ರಮ ಆಚರಣೆಗಾಗಿ ಕಾಲನಿಯ ಪ್ರತೀ ಮನೆಗಳಿಗೆ ಅಕ್ಕಿ, ಬೆಲ್ಲ, ಬೇಳೆ ,ತೆಂಗಿನಕಾಯಿ ಮತ್ತು ಪಟಾಕಿಗಳನ್ನು ವಿತರಿಸಲಾಯಿತು. ಸಮಸ್ತರೂ ಹಣತೆಗಳನ್ನು ಬೆಳಗಿ ಸುಡುಮದ್ದು ಸಿಡಿಸಿ ಸಂಭ್ರಮಿಸಿದರು.


ಮುಖ್ಯ ಅತಿಥಿಗಳಾಗಿ ಸಂಘದ ಉನ್ನತ ಅಧಿಕಾರಿಗಳಾದ ಶಿವಪ್ರಸಾದ್ ಮಲೇಬೆಟ್ಟು ರವರು ಆಗಮಿಸಿ ದೀಪಾವಳಿಯ ಮಹತ್ವ ವಿವರಿಸಿದರು ಮತ್ತು ಸಮಾಜದ ಎಲ್ಲಾ ವರ್ಗಗಳಿಗೂ ತಲುಪುವಂತೆ ಕಾರ್ಯಕ್ರಮ ಆಯೋಜಿಸುವುದು ಬಹಳ ಮುಖ್ಯ ಎಂದರು.
ಇನ್ನೋರ್ವ ಮುಖ ಅತಿಥಿ ಪೃಥ್ವಿರಾಜ್ ಶೆಟ್ಟಿ ಯವರು ಇಂತಹ ಕಾರ್ಯಕ್ರಮ ಆಯೋಜಿಸಿದವರು ಶ್ಲಾಘನೀಯರು ಎಂದರು .
ಕೃಷ್ಣಪ್ಪ ಉಪಸ್ಥಿತರಿದ್ದರು. ಆಗಮಿಸಿದ ಸರ್ವರಿಗೂ ರೋಟರಿ ಆನ್ಸ್ ಬೆಳ್ತಂಗಡಿ ಅಧ್ಯಕ್ಷೆ ಸಿಹಿತಿಂಡಿಗಳನ್ನು ವಿತರಿಸಿದರು.

Related posts

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya
error: Content is protected !!