September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

ಬೆಳ್ತಂಗಡಿ : ಖಾಸಗಿ ವ್ಯಕ್ತಿ ಮತ್ತು ಸಾರ್ವಜನಿಕರ ಎರಡು ಕೊರಗಜ್ಜ ಕಟ್ಟೆಯ ಪೂಜೆ ಮಾಡುವ ಬಗ್ಗೆ ಎದ್ದಿರುವ ವಿವಾದವಿರುವ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಸ್ಥಳಕ್ಕೆ ನ.15 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಹಾಗೂ ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ ಎರಡು ಕಡೆಯ ಕೊರಗಜ್ಜ ಕಟ್ಟೆಯ ಜಾಗವನ್ನು ಪರಿಶೀಲನೆ ನಡೆಸಿದರು‌.

ಅಧಿಕಾರಿಗಳ ಜಾಗ ಪರಿಶೀಲನೆ ವೇಳೆ ಸಾರ್ವಜನಿಕರು ಕೂಡ ಜಮಾಯಿಸಿದ್ದರು. ಕೊನೆಗೆ ಅಧಿಕಾರಿಗಳ ಜೊತೆ ಮಾತಾನಾಡಬೇಕಾಗಿ ಪಟ್ಟು ಹಿಡಿದ್ದಿದ್ದು ಈ ವೇಳೆ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು‌. ಬಳಿಕ ಪೊಲೀಸರು ಸಾರ್ವಜನಿಕರನ್ನು ಸ್ಥಳದಿಂದ ಕಳುಹಿಸಿದರು.ಇನ್ನೂ ಈ ಪ್ರಕರಣದ ಬಗ್ಗೆ ಪೂಜೆ ಮಾಡುವ ಕುರಿತು ಬೆಳ್ತಂಗಡಿ ಆಡಳಿತ ಸೌಧದಲ್ಲಿ ಎರಡು ತಂಡದ 10 ಜನ ಸದಸ್ಯರ ಜೊತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಧ್ಯಾಹ್ನದ ಬಳಿಕ ಸಭೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ , ಪುತ್ತೂರು ಎಸಿ ಗಿರೀಶ್ ನಂದನ್ , ದ.ಕ ಎಸ್ಪಿ ರಿಷ್ಯಂತ್ ,ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ , ಬೆಳ್ತಂಗಡಿ ತಹಶಿಲ್ದಾರ್ ಸುರೇಶ್ ಕುಮಾರ್, ಸರ್ವೆ ಇಲಾಖೆ , ಪೊಲೀಸ್ ಇಲಾಖೆ ಭಾಗಿಯಾಗಿದ್ದರು.

Related posts

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಪುಂಜಾಲಕಟ್ಟೆ ಸುಲಿಗೆ ಪ್ರಕರಣ; ಆರೋಪಿಯ ಬಂಧನ: ರೂ. 5 ಲಕ್ಷ ಮೌಲ್ಯದ ಚಿನ್ನದ ಬಳೆ ವಶ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ: ಅಝರ್ ನಾವೂರು

Suddi Udaya

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!