23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

ಬೆಳ್ತಂಗಡಿ : ಖಾಸಗಿ ವ್ಯಕ್ತಿ ಮತ್ತು ಸಾರ್ವಜನಿಕರ ಎರಡು ಕೊರಗಜ್ಜ ಕಟ್ಟೆಯ ಪೂಜೆ ಮಾಡುವ ಬಗ್ಗೆ ಎದ್ದಿರುವ ವಿವಾದವಿರುವ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಸ್ಥಳಕ್ಕೆ ನ.15 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಹಾಗೂ ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ ಎರಡು ಕಡೆಯ ಕೊರಗಜ್ಜ ಕಟ್ಟೆಯ ಜಾಗವನ್ನು ಪರಿಶೀಲನೆ ನಡೆಸಿದರು‌.

ಅಧಿಕಾರಿಗಳ ಜಾಗ ಪರಿಶೀಲನೆ ವೇಳೆ ಸಾರ್ವಜನಿಕರು ಕೂಡ ಜಮಾಯಿಸಿದ್ದರು. ಕೊನೆಗೆ ಅಧಿಕಾರಿಗಳ ಜೊತೆ ಮಾತಾನಾಡಬೇಕಾಗಿ ಪಟ್ಟು ಹಿಡಿದ್ದಿದ್ದು ಈ ವೇಳೆ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು‌. ಬಳಿಕ ಪೊಲೀಸರು ಸಾರ್ವಜನಿಕರನ್ನು ಸ್ಥಳದಿಂದ ಕಳುಹಿಸಿದರು.ಇನ್ನೂ ಈ ಪ್ರಕರಣದ ಬಗ್ಗೆ ಪೂಜೆ ಮಾಡುವ ಕುರಿತು ಬೆಳ್ತಂಗಡಿ ಆಡಳಿತ ಸೌಧದಲ್ಲಿ ಎರಡು ತಂಡದ 10 ಜನ ಸದಸ್ಯರ ಜೊತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಧ್ಯಾಹ್ನದ ಬಳಿಕ ಸಭೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ , ಪುತ್ತೂರು ಎಸಿ ಗಿರೀಶ್ ನಂದನ್ , ದ.ಕ ಎಸ್ಪಿ ರಿಷ್ಯಂತ್ ,ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ , ಬೆಳ್ತಂಗಡಿ ತಹಶಿಲ್ದಾರ್ ಸುರೇಶ್ ಕುಮಾರ್, ಸರ್ವೆ ಇಲಾಖೆ , ಪೊಲೀಸ್ ಇಲಾಖೆ ಭಾಗಿಯಾಗಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
error: Content is protected !!