25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಉದ್ಯಮಿ ಅಶ್ವಥ್ ಹೆಗ್ಡೆಯವರ ವಿರುದ್ಧ ಅನೇಕ ದಿನಗಳಿಂದ ಆಧಾರ ರಹಿತ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಸದ್ರಿ ಆರೋಪಗಳ ವಿರುದ್ಧ ಮಾನ್ಯ ಉಚ್ಚ ನ್ಯಾಯಾಲಯವು ವಿಚಾರಣೆ ನಡೆಸಿ ತಡೆಯಾಜ್ಞೆ ನೀಡಿದ್ದರೂ, ಕೆಲವೊಂದು ವ್ಯಕ್ತಿಗಳು ವೈಯಕ್ತಿಕ ಹಿತಾಸಕ್ತಿಯಿಂದ ಅಶ್ವಥ್ ಹೆಗ್ಡೆ ಮತ್ತು ಅವರ ಸಂಸ್ಥೆ ಎನ್ವಿಗ್ರೀನ್ ಬಯೋಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವಿರುದ್ಧ ಆಕ್ಷೇಪಾರ್ಹ ಪದಗಳಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ವರದಿ ಮಾಡುತ್ತಿದ್ದು,ಸದ್ರಿ ಸುಳ್ಳು ವರದಿಗಳ ವಿರುದ್ಧ ಅಶ್ವಥ್ ಹೆಗ್ಡೆಯವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಲ್ಲಿ , ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನಿರ್ಬಂಧಿಸಿದೆ. ಅಶ್ವಥ್ ಹೆಗ್ಡೆಯವರ ಪರವಾಗಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ , ಪ್ರಕಾಶ್ ಶರ್ಮ ವಾದಿಸಿದ್ದರು ಹಾಗೂ ಸುಯೋಗ್ ಹೇರಳೆ ವಕಾಲತ್ ವಹಿಸಿದ್ದರು.

ಅಶ್ವಥ್ ಹೆಗ್ಡೆಯವರು ಈಗಾಗಲೇ ಆಧಾರ ರಹಿತವಾಗಿ ಸುಳ್ಳು ಸುದ್ದಿಯನ್ನು ಹಬ್ಬಿಸಿ ಮಾನ ಹಾನಿ ಮಾಡಿ ಮಾನಸಿಕ ಹಿಂಸೆಯನ್ನು ನೀಡಿರುವವರ ವಿರುದ್ಧ 10ಕೋಟಿ ಪರಿಹಾರ ಆಗ್ರಹಿಸಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆಯನ್ನು ಹೂಡುವುದಾಗಿ ತಿಳಿಸಿದ್ದಾರೆ.

Related posts

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!