25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಉದ್ಯಮಿ ಅಶ್ವಥ್ ಹೆಗ್ಡೆಯವರ ವಿರುದ್ಧ ಅನೇಕ ದಿನಗಳಿಂದ ಆಧಾರ ರಹಿತ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಸದ್ರಿ ಆರೋಪಗಳ ವಿರುದ್ಧ ಮಾನ್ಯ ಉಚ್ಚ ನ್ಯಾಯಾಲಯವು ವಿಚಾರಣೆ ನಡೆಸಿ ತಡೆಯಾಜ್ಞೆ ನೀಡಿದ್ದರೂ, ಕೆಲವೊಂದು ವ್ಯಕ್ತಿಗಳು ವೈಯಕ್ತಿಕ ಹಿತಾಸಕ್ತಿಯಿಂದ ಅಶ್ವಥ್ ಹೆಗ್ಡೆ ಮತ್ತು ಅವರ ಸಂಸ್ಥೆ ಎನ್ವಿಗ್ರೀನ್ ಬಯೋಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವಿರುದ್ಧ ಆಕ್ಷೇಪಾರ್ಹ ಪದಗಳಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ವರದಿ ಮಾಡುತ್ತಿದ್ದು,ಸದ್ರಿ ಸುಳ್ಳು ವರದಿಗಳ ವಿರುದ್ಧ ಅಶ್ವಥ್ ಹೆಗ್ಡೆಯವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಲ್ಲಿ , ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನಿರ್ಬಂಧಿಸಿದೆ. ಅಶ್ವಥ್ ಹೆಗ್ಡೆಯವರ ಪರವಾಗಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ , ಪ್ರಕಾಶ್ ಶರ್ಮ ವಾದಿಸಿದ್ದರು ಹಾಗೂ ಸುಯೋಗ್ ಹೇರಳೆ ವಕಾಲತ್ ವಹಿಸಿದ್ದರು.

ಅಶ್ವಥ್ ಹೆಗ್ಡೆಯವರು ಈಗಾಗಲೇ ಆಧಾರ ರಹಿತವಾಗಿ ಸುಳ್ಳು ಸುದ್ದಿಯನ್ನು ಹಬ್ಬಿಸಿ ಮಾನ ಹಾನಿ ಮಾಡಿ ಮಾನಸಿಕ ಹಿಂಸೆಯನ್ನು ನೀಡಿರುವವರ ವಿರುದ್ಧ 10ಕೋಟಿ ಪರಿಹಾರ ಆಗ್ರಹಿಸಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆಯನ್ನು ಹೂಡುವುದಾಗಿ ತಿಳಿಸಿದ್ದಾರೆ.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya
error: Content is protected !!