ಗ್ರಾಮಾಂತರ ಸುದ್ದಿಚಿತ್ರ ವರದಿ

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಉದ್ಯಮಿ ಅಶ್ವಥ್ ಹೆಗ್ಡೆಯವರ ವಿರುದ್ಧ ಅನೇಕ ದಿನಗಳಿಂದ ಆಧಾರ ರಹಿತ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಸದ್ರಿ ಆರೋಪಗಳ ವಿರುದ್ಧ ಮಾನ್ಯ ಉಚ್ಚ ನ್ಯಾಯಾಲಯವು ವಿಚಾರಣೆ ನಡೆಸಿ ತಡೆಯಾಜ್ಞೆ ನೀಡಿದ್ದರೂ, ಕೆಲವೊಂದು ವ್ಯಕ್ತಿಗಳು ವೈಯಕ್ತಿಕ ಹಿತಾಸಕ್ತಿಯಿಂದ ಅಶ್ವಥ್ ಹೆಗ್ಡೆ ಮತ್ತು ಅವರ ಸಂಸ್ಥೆ ಎನ್ವಿಗ್ರೀನ್ ಬಯೋಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವಿರುದ್ಧ ಆಕ್ಷೇಪಾರ್ಹ ಪದಗಳಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ವರದಿ ಮಾಡುತ್ತಿದ್ದು,ಸದ್ರಿ ಸುಳ್ಳು ವರದಿಗಳ ವಿರುದ್ಧ ಅಶ್ವಥ್ ಹೆಗ್ಡೆಯವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಲ್ಲಿ , ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನಿರ್ಬಂಧಿಸಿದೆ. ಅಶ್ವಥ್ ಹೆಗ್ಡೆಯವರ ಪರವಾಗಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ , ಪ್ರಕಾಶ್ ಶರ್ಮ ವಾದಿಸಿದ್ದರು ಹಾಗೂ ಸುಯೋಗ್ ಹೇರಳೆ ವಕಾಲತ್ ವಹಿಸಿದ್ದರು.

ಅಶ್ವಥ್ ಹೆಗ್ಡೆಯವರು ಈಗಾಗಲೇ ಆಧಾರ ರಹಿತವಾಗಿ ಸುಳ್ಳು ಸುದ್ದಿಯನ್ನು ಹಬ್ಬಿಸಿ ಮಾನ ಹಾನಿ ಮಾಡಿ ಮಾನಸಿಕ ಹಿಂಸೆಯನ್ನು ನೀಡಿರುವವರ ವಿರುದ್ಧ 10ಕೋಟಿ ಪರಿಹಾರ ಆಗ್ರಹಿಸಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆಯನ್ನು ಹೂಡುವುದಾಗಿ ತಿಳಿಸಿದ್ದಾರೆ.

Related posts

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!