25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

ಬೆಳ್ತಂಗಡಿ: ವ್ಯವಸ್ಥಾಪನ ಸಮಿತಿಗಳ ಅಧಿಕಾರಾವಧಿ ಮುಗಿದಿರುವ ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.

ಕಲ್ಮಂಜ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಳಕ್ಕೆ ಮುಂಡಾಜೆಯ ಹಿರಿಯ ಪಶು ವೈದ್ಯ ಪರಿವೀಕ್ಷಕ, ಮಚ್ಚಿನ ಮಾಣೂರು ಶ್ರೀ ಧರ್ಮಶಾಸ್ತ್ರಾವು ದೇವಸ್ಥಾನಕ್ಕೆ ಮಚ್ಚಿನ ಗ್ರಾಪಂ ಪಿಡಿಒ, ಮುಂಡಾಜೆಯ ಶ್ರೀ ಮೂರ್ತಿಲ್ಲಾಯಿ ದೈವಸ್ಥಾನಕ್ಕೆ ಮುಂಡಾಜೆ ಗ್ರಾಮಕರಣಿಕ, ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನಕ್ಕೆ ಬೆಳಾಲು ಗ್ರಾಪಂ ಕಾರ್ಯದರ್ಶಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನಕ್ಕೆ ಗರ್ಡಾಡಿ ಗ್ರಾಮಕರಣಿಕ, ಮುಂಡೂರು ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಮುಂಡೂರು ಗ್ರಾಮಕರಣಿಕ, ತೋಟತ್ತಾಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಚಾರ್ಮಾಡಿ ಗ್ರಾಪಂ ಪಿಡಿಒ, ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೇಲಂತಬೆಟ್ಟು ಗ್ರಾಪಂ ಕಾರ್ಯದರ್ಶಿ, ನ್ಯಾಯತರ್ಪು ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತಣ್ಣೀರುಪಂತ ಗ್ರಾಪಂ ಪಿಡಿಒ, ಪುದುವೆಟ್ಟು ಶ್ರೀ ಮಿಯ್ಯಾರು ವನದುರ್ಗಾದೇವಿ ದೇವಸ್ಥಾನಕ್ಕೆ ಪುದುವೆಟ್ಟು ಗ್ರಾಮಕರಣಿಕ, ಕರಂಬಾರು ಶ್ರೀ ಕೊರ್ಲಿ ಈಶ್ವರ ದೇವಸ್ಥಾನಕ್ಕೆ ಕರಂಬಾರು ಗ್ರಾಮಕರಣಿಕ, ಇಂದಬೆಟ್ಟು ಶ್ರೀ ಬಂಗಾಡಿ ಹಾಡಿದೈವ ದೈವಸ್ಥಾನಕ್ಕೆ ಬೆಳ್ತಂಗಡಿ ಹೋಬಳಿ ಕಂದಾಯ ನಿರೀಕ್ಷಕ, ಮಿತ್ತಬಾಗಿಲು ಶ್ರೀ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಿತ್ತಬಾಗಿಲು ಗ್ರಾಪಂ ಪಿಡಿಒ, ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಕಾಶಿಪಟ್ಣ ಗ್ರಾಪಂ ಪಿಡಿಒ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವೇಣೂರು ಗ್ರಾಮಕರಣಿಕ, ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಿರ್ಲಾಲು ಪಿಡಿಒ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

Related posts

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಆಯೋಜನೆ

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya
error: Content is protected !!