25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

ಬೆಳ್ತಂಗಡಿ: ಸಾಂಸ್ಕೃತಿಕವಾದ ಅಭಿರುಚಿಗಳನ್ನು ಬೆಳೆಸಿಕೊಂಡಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದು ಎಂದು ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಗಳಿಸುವುದನ್ನು ಮಾತ್ರ ಉದ್ದೇಶವಾಗಿಟ್ಟುಕೊಳ್ಳದೆ ತಮ್ಮಲ್ಲಿರುವ ಪ್ರತಿಭೆಗಳನ್ನು ಬೆಳೆಸಿಕೊಳ್ಳಬೇಕು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ನೆಮ್ಮದಿಯನ್ನು ಪಡೆಯಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು. ಕಾಲೇಜಿನ ಸಾಂಸ್ಕೃತಿಕ ಸಂಯೋಜಕರುಗಳಾದ ಮಹಾಬಲ ಗೌಡ ಸ್ವಾಗತಿಸಿದರು. ಶ್ರೀಮತಿ ದೀಕ್ಷಾ ಹೊಂದಿಸಿದರು ಉಪನ್ಯಾಸಕ ಹರ್ಷಿತ್ ಕಾರ್ಯಕ್ರಮ ನಿರೂಪಿಸಿದರು.

Related posts

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya
error: Content is protected !!