ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯರಾದ ಕು. ಗೀತಾರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ಯು ಶೇಪ್ ವಾಕರನ್ನು ಬೆಳಾಲು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ್ ಬಾರಿತಾಯರವರು ವಿತರಿಸಿದರು,

ಈ ಸಂದರ್ಭ ಜನಜಾಗೃತಿ ವೇದಿಕೆಯ ತಾಲೂಕು ಸಮಿತಿಯ ಸದಸ್ಯ ಯೋಗೀಶ್ ಗೌಡ,”ಶೌರ್ಯ” ವಿಪತ್ತು ಘಟಕದ ಕ್ಯಾಪ್ಟನ್ ಸಂತೋಷ್ ಬೆಳಾಲ್, ಒಕ್ಕೂಟದ ಉಪಾಧ್ಯಕ್ಷರಾದ ತಾರಾನಾಥ್, ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷ ಪ್ರಶಾಂತ್, ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್, ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಆಶಾ, ಕು.ಧನ್ಯರವರು ಉಪಸ್ಥಿತರಿದ್ದರು.

Leave a Comment

error: Content is protected !!