ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ,ಕೊಲ್ಪಾಡಿ ಕಾರ್ಯಕ್ಷೇತ್ರದ ನಾಗಶ್ರೀ ಎ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಡೊoಬಕ್ಕ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ 30,000/-ಸಹಾಯಧನ ಹಾಗೂ ವೀಲ್ ಚೇರ್ ರನ್ನು ಒಕ್ಕೂಟದ ಅಧ್ಯಕ್ಷರಾದ ಎಲ್ಯನ್ನ ನಾಯ್ಕ್ ವರು ವಿತರಿಸಿದರು.

ಈ ಸಂದರ್ಭ ಜನಜಾಗೃತಿ ವೇದಿಕೆಯ ತಾಲೂಕು ಸಮಿತಿಯ ಸದಸ್ಯರಾದ ಯೋಗೀಶ್ ಗೌಡ,”ಶೌರ್ಯ” ವಿಪತ್ತು ಘಟಕದ ಕ್ಯಾಪ್ಟನ್ ಸಂತೋಷ್ ಬೆಳಾಲ್,ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್, ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್,ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಮೀಳಾರವರು ಉಪಸ್ಥಿತರಿದ್ದರು.

Leave a Comment

error: Content is protected !!