ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಲಾಯಿಲ ವಲಯದ, ಮಲೆಬೆಟ್ಟು ಕಾರ್ಯಕ್ಷೇತ್ರದ ಮಹಾಗಣಪತಿ ಸ್ವ-ಸಹಾಯ ಸಂಘದ ಸದಸ್ಯರಾದ ಶಾಂತಪ್ಪ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ರೂ. 80,000 ಮೊತ್ತದ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಗಳಾದ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಹಿರಿಯರಾದ ತನಿಯಪ್ಪ ಪೂಜಾರಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಬಾಲಚಂದ್ರ ಗೌಡ, ವಲಯ ಮೇಲ್ವಿಚಾರಕರಾದ ಸುಶಾಂತ್, ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಜಯಂತಿ ಶ್ರೀಮತಿ ಸಚಿತ, ಸೇವಾ ಪ್ರತಿನಿಧಿಯಾದ ಲೀಲಾವತಿಯವರು ಉಪಸ್ಥಿತರಿದ್ದರು.

Leave a Comment

error: Content is protected !!