23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.14ರಂದು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಿಯೋನ್ ಸಭಾಂಗಣದಲ್ಲಿ ರಂಗೋಲಿ ಹಾಕಿ ದೀಪ ಹಚ್ಚಿ ವಿವಿಧ ಬಗೆಯ ಪಟಾಕಿಗಳನ್ನು ಸಿಡಿಸಿ ಆಶ್ರಮನಿವಾಸಿಗಳೆಲ್ಲರೂ ಸಂಭ್ರಮಿಸಿದರು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ.ಪೌಲೋಸ್‌ರವರು, ಟ್ರಸ್ಟಿ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು. ವಿವಿಧ ಬಗೆಯ ಸಿಹಿತಿಂಡಿ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.

ಡಾ.ಕಲಾಮಧು ಶೆಟ್ಟಿಯವರು ದೀಪಾವಳಿ ಪ್ರಯುಕ್ತ ಆಶ್ರಮವಾಸಿಗಳಿಗೋಸ್ಕರ ಅವಲಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿತಿಂಡಿ ನೀಡಿದರು. ಮಧ್ಯಾಹ್ನದ ಭೋಜನವನ್ನು ಜಯಪ್ರಕಾಶ್ ಶೆಟ್ಟಿ ಬೆಳ್ತಂಗಡಿ ಇವರು ನೀಡಿದ್ದರು.

Related posts

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!