25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

ಇಲಂತಿಲ ನಿವಾಸಿ ನಾರಾಯಣ ಪೂಜಾರಿಯವರು ಅ.24 ರಂದು ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.16 ರಂದು ನಿಧನರಾಗಿದ್ದಾರೆ.

ಘಟನೆ ವಿವರ: ಇಳಂತಿಲ ನಿವಾಸಿ ನಾರಾಯಣ ಪೂಜಾರಿ ( 54 ವರ್ಷ) ರವರು ಕೃಷಿ ಕೆಲಸ ಮಾಡಿಕೊಂಡಿದ್ದು,ಅ.24. ರಂದು ಕೆಲಸದಾಳುಗಳಾದ ಚಿನ್ನಯ್ಯ ಮತ್ತು ಬಾಳಪ್ಪ ಎಂಬವರೊಂದಿಗೆ ಇಳಂತಿಲ ಗ್ರಾಮ ಪಾಡೆಂಕಿ ಎಂಬಲ್ಲಿರುವ ಅವರ ತೋಟಕ್ಕೆ ಗೆಲ್ಲು ಕಡಿಯಲೆಂದು ಹೋದವರು ಮದ್ಯಾಹ್ನ ಮರ ಏರಿ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡವರನ್ನು ಉಪಚರಿಸಿ ಅವರ ಮನೆಯವರು ಚಿಕಿತ್ಸೆಯ ಬಗ್ಗೆ ಆಟೋ ರಿಕ್ಷಾ ಬರ ಹೇಳಿ ಪುತ್ತೂರು ಮಹಾವೀರ ಆಸ್ಪತ್ರೆಗೆ ಕೊಂಡು ಹೋದಾಗ ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆಯ ಆಸ್ಪತ್ರೆಗೆ ಹೋಗುವಂತೆ ತಿಳಿಸಿದ್ದು, ಅದರಂತೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಕೊಂಡುಹೋಗಿ ದಾಖಲಿಸಿ ಚಿಕಿತ್ಸೆಯಲ್ಲಿದ್ದ ನಾರಾಯಣ ಪೂಜಾರಿ ಯವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೇ ನ.16 ರಂದು ಮದ್ಯಾಹ್ನ ಮೃತಪಟ್ಟಿರುತ್ತಾರೆ ಎಂಬುದಾಗಿದೆ ನಾರಾಯಣ ಪೂಜಾರಿಯವರ ಪುತ್ರಿ ನಿಶ್ವಿತಾ ದೂರು ನೀಡಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ 44/2023 ಕಲಂ:174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya
error: Content is protected !!