25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ.

ನ. 14ರಂದು ರಾತ್ರಿ 7. 30ರ ವೇಳೆಗೆ ತಮ್ಮ ಮನೆಯಲ್ಲಿ ನಳಿನಿ ಅವರ ಗಂಡ ಮಹೇಶ್ ಮತ್ತು ಮಗು ಇರುವಾಗ ಸಂಜೆ ರಾಧಾಕೃಷ್ಣ, ರಂಜಿತ್, ಆನಂದ ಗೌಡ, ಸುದರ್ಶನ್, ಸುಧಾಕರ ಮತ್ತು ಇತರ 5 ಮಂದಿ 3 ವಾಹನಗಳಲ್ಲಿ ಬಂದು ಮನೆಗೆ ಅಕ್ರಮ ಪ್ರವೇಶಿಸಿ ಬೆದರಿಕೆ ಒಡ್ಡಿದ್ದಾರೆ. ಮರಳು ತೆಗೆಯುವುದರ ವಿರುದ್ಧ ನೀವು ದೂರು ನೀಡಿದ್ದೀರಿ. ನಿಮ್ಮನ್ನು ಹೀಗೆ ಬಿಡುವುದಿಲ್ಲ. ನಿಮ್ಮನ್ನು ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಆರೋಪಿಗಳು ಒಂದು ಮಾರುತಿ 800 ಕಾರು, ಒಂದು ಬುಲೆಟ್ ಮತ್ತು ಒಂದು ಹೀರೋ ಹೋಂಡಾ ವಾಹನಗಳಲ್ಲಿ ಬಂದು ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ದೊಣ್ಣೆ ಹಾಗೂ ರಾಡ್ ಹಿಡಿದು ಬೆದರಿಕೆ ಒಡ್ಡಿದ್ದಾರೆ.
ನಳಿನಿ ಅವರ ಮೈಮೇಲೆ ಕೈ ಮಾಡಿ ಬಳೆಗಳನ್ನು ಒಡೆದಿದ್ದಾರೆ. ಅಷ್ಟರಲ್ಲಿ ನೆರೆ ಮನೆಯವರು ಧಾವಿಸಿ ಬಂದಿದ್ದು ಅಷ್ಟರಲ್ಲಿ ಅವರು ಪರಾರಿಯಾಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಕ್ರ ನಂ 113/2023 ಕಲಂ; 143,147,148,448,506,354 ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya
error: Content is protected !!