37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ.

ನ. 14ರಂದು ರಾತ್ರಿ 7. 30ರ ವೇಳೆಗೆ ತಮ್ಮ ಮನೆಯಲ್ಲಿ ನಳಿನಿ ಅವರ ಗಂಡ ಮಹೇಶ್ ಮತ್ತು ಮಗು ಇರುವಾಗ ಸಂಜೆ ರಾಧಾಕೃಷ್ಣ, ರಂಜಿತ್, ಆನಂದ ಗೌಡ, ಸುದರ್ಶನ್, ಸುಧಾಕರ ಮತ್ತು ಇತರ 5 ಮಂದಿ 3 ವಾಹನಗಳಲ್ಲಿ ಬಂದು ಮನೆಗೆ ಅಕ್ರಮ ಪ್ರವೇಶಿಸಿ ಬೆದರಿಕೆ ಒಡ್ಡಿದ್ದಾರೆ. ಮರಳು ತೆಗೆಯುವುದರ ವಿರುದ್ಧ ನೀವು ದೂರು ನೀಡಿದ್ದೀರಿ. ನಿಮ್ಮನ್ನು ಹೀಗೆ ಬಿಡುವುದಿಲ್ಲ. ನಿಮ್ಮನ್ನು ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಆರೋಪಿಗಳು ಒಂದು ಮಾರುತಿ 800 ಕಾರು, ಒಂದು ಬುಲೆಟ್ ಮತ್ತು ಒಂದು ಹೀರೋ ಹೋಂಡಾ ವಾಹನಗಳಲ್ಲಿ ಬಂದು ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ದೊಣ್ಣೆ ಹಾಗೂ ರಾಡ್ ಹಿಡಿದು ಬೆದರಿಕೆ ಒಡ್ಡಿದ್ದಾರೆ.
ನಳಿನಿ ಅವರ ಮೈಮೇಲೆ ಕೈ ಮಾಡಿ ಬಳೆಗಳನ್ನು ಒಡೆದಿದ್ದಾರೆ. ಅಷ್ಟರಲ್ಲಿ ನೆರೆ ಮನೆಯವರು ಧಾವಿಸಿ ಬಂದಿದ್ದು ಅಷ್ಟರಲ್ಲಿ ಅವರು ಪರಾರಿಯಾಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಕ್ರ ನಂ 113/2023 ಕಲಂ; 143,147,148,448,506,354 ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya
error: Content is protected !!