23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ.

ನ. 14ರಂದು ರಾತ್ರಿ 7. 30ರ ವೇಳೆಗೆ ತಮ್ಮ ಮನೆಯಲ್ಲಿ ನಳಿನಿ ಅವರ ಗಂಡ ಮಹೇಶ್ ಮತ್ತು ಮಗು ಇರುವಾಗ ಸಂಜೆ ರಾಧಾಕೃಷ್ಣ, ರಂಜಿತ್, ಆನಂದ ಗೌಡ, ಸುದರ್ಶನ್, ಸುಧಾಕರ ಮತ್ತು ಇತರ 5 ಮಂದಿ 3 ವಾಹನಗಳಲ್ಲಿ ಬಂದು ಮನೆಗೆ ಅಕ್ರಮ ಪ್ರವೇಶಿಸಿ ಬೆದರಿಕೆ ಒಡ್ಡಿದ್ದಾರೆ. ಮರಳು ತೆಗೆಯುವುದರ ವಿರುದ್ಧ ನೀವು ದೂರು ನೀಡಿದ್ದೀರಿ. ನಿಮ್ಮನ್ನು ಹೀಗೆ ಬಿಡುವುದಿಲ್ಲ. ನಿಮ್ಮನ್ನು ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಆರೋಪಿಗಳು ಒಂದು ಮಾರುತಿ 800 ಕಾರು, ಒಂದು ಬುಲೆಟ್ ಮತ್ತು ಒಂದು ಹೀರೋ ಹೋಂಡಾ ವಾಹನಗಳಲ್ಲಿ ಬಂದು ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ದೊಣ್ಣೆ ಹಾಗೂ ರಾಡ್ ಹಿಡಿದು ಬೆದರಿಕೆ ಒಡ್ಡಿದ್ದಾರೆ.
ನಳಿನಿ ಅವರ ಮೈಮೇಲೆ ಕೈ ಮಾಡಿ ಬಳೆಗಳನ್ನು ಒಡೆದಿದ್ದಾರೆ. ಅಷ್ಟರಲ್ಲಿ ನೆರೆ ಮನೆಯವರು ಧಾವಿಸಿ ಬಂದಿದ್ದು ಅಷ್ಟರಲ್ಲಿ ಅವರು ಪರಾರಿಯಾಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಕ್ರ ನಂ 113/2023 ಕಲಂ; 143,147,148,448,506,354 ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya
error: Content is protected !!