23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ.

ನ. 14ರಂದು ರಾತ್ರಿ 7. 30ರ ವೇಳೆಗೆ ತಮ್ಮ ಮನೆಯಲ್ಲಿ ನಳಿನಿ ಅವರ ಗಂಡ ಮಹೇಶ್ ಮತ್ತು ಮಗು ಇರುವಾಗ ಸಂಜೆ ರಾಧಾಕೃಷ್ಣ, ರಂಜಿತ್, ಆನಂದ ಗೌಡ, ಸುದರ್ಶನ್, ಸುಧಾಕರ ಮತ್ತು ಇತರ 5 ಮಂದಿ 3 ವಾಹನಗಳಲ್ಲಿ ಬಂದು ಮನೆಗೆ ಅಕ್ರಮ ಪ್ರವೇಶಿಸಿ ಬೆದರಿಕೆ ಒಡ್ಡಿದ್ದಾರೆ. ಮರಳು ತೆಗೆಯುವುದರ ವಿರುದ್ಧ ನೀವು ದೂರು ನೀಡಿದ್ದೀರಿ. ನಿಮ್ಮನ್ನು ಹೀಗೆ ಬಿಡುವುದಿಲ್ಲ. ನಿಮ್ಮನ್ನು ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಆರೋಪಿಗಳು ಒಂದು ಮಾರುತಿ 800 ಕಾರು, ಒಂದು ಬುಲೆಟ್ ಮತ್ತು ಒಂದು ಹೀರೋ ಹೋಂಡಾ ವಾಹನಗಳಲ್ಲಿ ಬಂದು ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ದೊಣ್ಣೆ ಹಾಗೂ ರಾಡ್ ಹಿಡಿದು ಬೆದರಿಕೆ ಒಡ್ಡಿದ್ದಾರೆ.
ನಳಿನಿ ಅವರ ಮೈಮೇಲೆ ಕೈ ಮಾಡಿ ಬಳೆಗಳನ್ನು ಒಡೆದಿದ್ದಾರೆ. ಅಷ್ಟರಲ್ಲಿ ನೆರೆ ಮನೆಯವರು ಧಾವಿಸಿ ಬಂದಿದ್ದು ಅಷ್ಟರಲ್ಲಿ ಅವರು ಪರಾರಿಯಾಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಕ್ರ ನಂ 113/2023 ಕಲಂ; 143,147,148,448,506,354 ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya
error: Content is protected !!