September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ.

ನ. 14ರಂದು ರಾತ್ರಿ 7. 30ರ ವೇಳೆಗೆ ತಮ್ಮ ಮನೆಯಲ್ಲಿ ನಳಿನಿ ಅವರ ಗಂಡ ಮಹೇಶ್ ಮತ್ತು ಮಗು ಇರುವಾಗ ಸಂಜೆ ರಾಧಾಕೃಷ್ಣ, ರಂಜಿತ್, ಆನಂದ ಗೌಡ, ಸುದರ್ಶನ್, ಸುಧಾಕರ ಮತ್ತು ಇತರ 5 ಮಂದಿ 3 ವಾಹನಗಳಲ್ಲಿ ಬಂದು ಮನೆಗೆ ಅಕ್ರಮ ಪ್ರವೇಶಿಸಿ ಬೆದರಿಕೆ ಒಡ್ಡಿದ್ದಾರೆ. ಮರಳು ತೆಗೆಯುವುದರ ವಿರುದ್ಧ ನೀವು ದೂರು ನೀಡಿದ್ದೀರಿ. ನಿಮ್ಮನ್ನು ಹೀಗೆ ಬಿಡುವುದಿಲ್ಲ. ನಿಮ್ಮನ್ನು ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಆರೋಪಿಗಳು ಒಂದು ಮಾರುತಿ 800 ಕಾರು, ಒಂದು ಬುಲೆಟ್ ಮತ್ತು ಒಂದು ಹೀರೋ ಹೋಂಡಾ ವಾಹನಗಳಲ್ಲಿ ಬಂದು ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ದೊಣ್ಣೆ ಹಾಗೂ ರಾಡ್ ಹಿಡಿದು ಬೆದರಿಕೆ ಒಡ್ಡಿದ್ದಾರೆ.
ನಳಿನಿ ಅವರ ಮೈಮೇಲೆ ಕೈ ಮಾಡಿ ಬಳೆಗಳನ್ನು ಒಡೆದಿದ್ದಾರೆ. ಅಷ್ಟರಲ್ಲಿ ನೆರೆ ಮನೆಯವರು ಧಾವಿಸಿ ಬಂದಿದ್ದು ಅಷ್ಟರಲ್ಲಿ ಅವರು ಪರಾರಿಯಾಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಕ್ರ ನಂ 113/2023 ಕಲಂ; 143,147,148,448,506,354 ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಬದನಾಜೆ ಶಾಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ “ಯಶೋ-ವಿಜಯ” ಬದುಕು-ನೆನಪು-ಸ್ಮರಣೆ: ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!