April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ನ.19 ರಂದು ಆದಿತ್ಯವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.೦೦ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ ನಡೆಸಲಾಗುವುದು.

ಅಸ್ತಮ, ಉಬ್ಬಸ ಅತಿಸಾರ (ಅತಿಭೇದಿ), ಮಲಬದ್ಧತೆ, ಜ್ವರ, ಅಲರ್ಜಿ, ರ್‍ಯಾಶಸ್ (ದದ್ದುಗಳು), ಚರ್ಮದ ಸೋಂಕು, ಕೆಮ್ಮು, ಕಫ, ಹೊಟ್ಟೆ ನೋವು, ಹಲ್ಲುನೋವು, ಕಟ್ಟಿಕೊಳ್ಳುವ ಮೂಗು, ವಾಕರಿಕೆ ಮತ್ತು ವಾಂತಿ, ಪೌಷ್ಟಿಕಾಂಶದ ಕೊರತೆ, ಮೂರ್ಛೆರೋಗ, ಮಕ್ಕಳ ಬೆಳವಣಿಗೆಯ ಮೌಲ್ಯಮಾಪನ, ಜಾಂಡೀಸ್, ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುವುದು.

ಮಕ್ಕಳರೋಗ ತಜ್ಞರಾದ ಡಾ| ಅರ್ಚನಾ ಕೆ.ಎಂ MBBS., MD (Pediatric) ಮಕ್ಕಳ ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10% , ಔಷಧದಲ್ಲಿ 10% , ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!