23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ನ.19 ರಂದು ಆದಿತ್ಯವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.೦೦ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ ನಡೆಸಲಾಗುವುದು.

ಅಸ್ತಮ, ಉಬ್ಬಸ ಅತಿಸಾರ (ಅತಿಭೇದಿ), ಮಲಬದ್ಧತೆ, ಜ್ವರ, ಅಲರ್ಜಿ, ರ್‍ಯಾಶಸ್ (ದದ್ದುಗಳು), ಚರ್ಮದ ಸೋಂಕು, ಕೆಮ್ಮು, ಕಫ, ಹೊಟ್ಟೆ ನೋವು, ಹಲ್ಲುನೋವು, ಕಟ್ಟಿಕೊಳ್ಳುವ ಮೂಗು, ವಾಕರಿಕೆ ಮತ್ತು ವಾಂತಿ, ಪೌಷ್ಟಿಕಾಂಶದ ಕೊರತೆ, ಮೂರ್ಛೆರೋಗ, ಮಕ್ಕಳ ಬೆಳವಣಿಗೆಯ ಮೌಲ್ಯಮಾಪನ, ಜಾಂಡೀಸ್, ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುವುದು.

ಮಕ್ಕಳರೋಗ ತಜ್ಞರಾದ ಡಾ| ಅರ್ಚನಾ ಕೆ.ಎಂ MBBS., MD (Pediatric) ಮಕ್ಕಳ ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10% , ಔಷಧದಲ್ಲಿ 10% , ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!