24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆಯು ನ.16 ರಂದು ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿತು.

ಸಭೆಯನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಾಕೇಸರಿಯವರು ಮಾತನಾಡಿ, ಗುಣಮಟ್ಟದ ಶಿಕ್ಷಣದಲ್ಲಿ ಬೆಳ್ತಂಗಡಿ ತಾಲೂಕು ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಇದಕ್ಕೆ ಸವಾಲುಗಳನ್ನು ಎದುರಿಸಿ ಪ್ರಾಮಾಣಿಕವಾಗಿ ದುಡಿಯುವ ಶಿಕ್ಷಕರು ಕಾರಣ. ಈ ನಿಟ್ಟಿನಲ್ಲಿ ಇಲಾಖೆಯು ಆಯೋಜಿಸುವ ತರಬೇತಿಗಳು ಉತ್ತಮ ಪ್ರೇರಣೆ ನೀಡಬಲ್ಲದು ಎಂಬ ಅಭಿಪ್ರಾಯದೊಂದಿಗೆ ಇದೇ ರೀತಿಯ ಸಭೆಯು ತಾಲೂಕಿನ ಬೇರೆಬೇರೆ ಶಾಲೆಗಳಲ್ಲಿ ಎಲ್ಲ ವಿಷಯಗಳಲ್ಲೂ ಜರಗಲಿದೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭವು ವೇದಿಕೆಯ ಸಂಚಾಲಕರಾದ ರಾಮಕೃಷ್ಣ ಭಟ್ ಬೆಳಾಲುರವರ ಅಧ್ಯಕ್ಷತೆಯಲ್ಲಿ ಜರಗಿತು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರಾದ ಸಿದ್ಧಲಿಂಗ ಸ್ವಾಮಿ, ವಲಯ ಸಂಪನ್ಮೂಲ ಅಧಿಕಾರಿ ಶ್ರೀಮತಿ ಸಂಧ್ಯಾ, ಸಂಪನ್ಮೂಲ ವ್ಯಕ್ತಿಗಳಾದ ದ ಕ ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಮಹಮ್ಮದ್ ರಿಯಾಜ್, ವಸಂತ ನಾಯ್ಕ್ ಪುತ್ತಿಲ, ಪೂರ್ಣಿಮಾ ಬೆಳ್ತಂಗಡಿ, ಚೈತ್ರ ಸವಣಾಲು, ಶಿಕ್ಷಕ ಸಂಘದ ತಾಲೂಕಿನ ಕಾರ್ಯದರ್ಶಿಗಳಾದ ಶಿವಪುತ್ರ ನಡ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯರುಗಳು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಮತಿಯವರು ಸ್ವಾಗತಿಸಿ, ವಸಂತ ನಾಯ್ಕ್ ಪುತ್ತಿಲರು ಸ್ವಾಗತಿಸಿದರು.

ಗುಣಮಟ್ಟದ ಶಿಕ್ಷಣದ ಕುರಿತಾದ ಕಾರ್ಯಾಗಾರವು ವಿವಿಧ ಚಟುವಟಿಕೆಗಳು ಮತ್ತು ಗುಂಪು ಚರ್ಚೆಯ ಮೂಲಕ ಸಂಜೆಯವರೆಗೆ ನಡೆಯಿತು.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya
error: Content is protected !!