22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆಯು ನ.16 ರಂದು ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿತು.

ಸಭೆಯನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಾಕೇಸರಿಯವರು ಮಾತನಾಡಿ, ಗುಣಮಟ್ಟದ ಶಿಕ್ಷಣದಲ್ಲಿ ಬೆಳ್ತಂಗಡಿ ತಾಲೂಕು ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಇದಕ್ಕೆ ಸವಾಲುಗಳನ್ನು ಎದುರಿಸಿ ಪ್ರಾಮಾಣಿಕವಾಗಿ ದುಡಿಯುವ ಶಿಕ್ಷಕರು ಕಾರಣ. ಈ ನಿಟ್ಟಿನಲ್ಲಿ ಇಲಾಖೆಯು ಆಯೋಜಿಸುವ ತರಬೇತಿಗಳು ಉತ್ತಮ ಪ್ರೇರಣೆ ನೀಡಬಲ್ಲದು ಎಂಬ ಅಭಿಪ್ರಾಯದೊಂದಿಗೆ ಇದೇ ರೀತಿಯ ಸಭೆಯು ತಾಲೂಕಿನ ಬೇರೆಬೇರೆ ಶಾಲೆಗಳಲ್ಲಿ ಎಲ್ಲ ವಿಷಯಗಳಲ್ಲೂ ಜರಗಲಿದೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭವು ವೇದಿಕೆಯ ಸಂಚಾಲಕರಾದ ರಾಮಕೃಷ್ಣ ಭಟ್ ಬೆಳಾಲುರವರ ಅಧ್ಯಕ್ಷತೆಯಲ್ಲಿ ಜರಗಿತು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರಾದ ಸಿದ್ಧಲಿಂಗ ಸ್ವಾಮಿ, ವಲಯ ಸಂಪನ್ಮೂಲ ಅಧಿಕಾರಿ ಶ್ರೀಮತಿ ಸಂಧ್ಯಾ, ಸಂಪನ್ಮೂಲ ವ್ಯಕ್ತಿಗಳಾದ ದ ಕ ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಮಹಮ್ಮದ್ ರಿಯಾಜ್, ವಸಂತ ನಾಯ್ಕ್ ಪುತ್ತಿಲ, ಪೂರ್ಣಿಮಾ ಬೆಳ್ತಂಗಡಿ, ಚೈತ್ರ ಸವಣಾಲು, ಶಿಕ್ಷಕ ಸಂಘದ ತಾಲೂಕಿನ ಕಾರ್ಯದರ್ಶಿಗಳಾದ ಶಿವಪುತ್ರ ನಡ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯರುಗಳು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಮತಿಯವರು ಸ್ವಾಗತಿಸಿ, ವಸಂತ ನಾಯ್ಕ್ ಪುತ್ತಿಲರು ಸ್ವಾಗತಿಸಿದರು.

ಗುಣಮಟ್ಟದ ಶಿಕ್ಷಣದ ಕುರಿತಾದ ಕಾರ್ಯಾಗಾರವು ವಿವಿಧ ಚಟುವಟಿಕೆಗಳು ಮತ್ತು ಗುಂಪು ಚರ್ಚೆಯ ಮೂಲಕ ಸಂಜೆಯವರೆಗೆ ನಡೆಯಿತು.

Related posts

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!