ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ: ದುಬೈ ಪ್ರವಾಸ ಕೈಗೊಂಡಿರುವ ಪೊಲೀಸ್ ಇಲಾಖೆಯಲ್ಲಿ‌ ದಕ್ಷ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಯವರನ್ನು ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ಗೌರವಿಸಿ, ಸನ್ಮಾನಿಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬೆಳೆದು ಬಂದ ದಾರಿ, ಅದರೊಂದಿಗೆ ಕ್ಷೇತ್ರದಿಂದ ನಡೆಯುವ ತಾಯಿಗೆ ಪ್ರಿಯವಾದ ಗೆಜ್ಜೆ ಸೇವೆಯ ಮುಖಾಂತರ ನಡೆಯುವ ಯಕ್ಷಗಾನದ ಬಗ್ಗೆ ಹಾಗೂ ಇದಕ್ಕೆಲ್ಲ ಸಹಕರಿಸಿದ ದುಬೈ ಬಿಲ್ಲವರನ್ನು ಸ್ಮರಿಸುತ್ತಾ ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರವನ್ನು ಸರ್ವತೋಮುಖ ಅಭಿವೃದ್ಧಿಯತ್ತ ಕೊಂಡೊಯ್ಯುವ ಬಗ್ಗೆ ಪೀತಾಂಬರ ಹೇರಾಜೆಯವರು ವಿವರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾಗಿರುವ‌‌ ದೀಪಕ್ ಎಸ್ ಪಿ ಮತ್ತು ಸಂಘಟನೆಯ ಮಾಜಿ ಅಧ್ಯಕ್ಷರುಗಳಾಗಿರುವ ಜೀತೆಂದ್ರ ಸುವರ್ಣ, ಮೋಹನ್ ಅತ್ತಾವರ್, ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯರು ಉದ್ಯಮಿಗಳಾದ ಸತೀಶ್ ಪೂಜಾರಿ ದುಬೈ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!