September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ದುಬೈ ಪ್ರವಾಸ ಕೈಗೊಂಡಿರುವ ಪೊಲೀಸ್ ಇಲಾಖೆಯಲ್ಲಿ‌ ದಕ್ಷ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಯವರನ್ನು ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ಗೌರವಿಸಿ, ಸನ್ಮಾನಿಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬೆಳೆದು ಬಂದ ದಾರಿ, ಅದರೊಂದಿಗೆ ಕ್ಷೇತ್ರದಿಂದ ನಡೆಯುವ ತಾಯಿಗೆ ಪ್ರಿಯವಾದ ಗೆಜ್ಜೆ ಸೇವೆಯ ಮುಖಾಂತರ ನಡೆಯುವ ಯಕ್ಷಗಾನದ ಬಗ್ಗೆ ಹಾಗೂ ಇದಕ್ಕೆಲ್ಲ ಸಹಕರಿಸಿದ ದುಬೈ ಬಿಲ್ಲವರನ್ನು ಸ್ಮರಿಸುತ್ತಾ ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರವನ್ನು ಸರ್ವತೋಮುಖ ಅಭಿವೃದ್ಧಿಯತ್ತ ಕೊಂಡೊಯ್ಯುವ ಬಗ್ಗೆ ಪೀತಾಂಬರ ಹೇರಾಜೆಯವರು ವಿವರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾಗಿರುವ‌‌ ದೀಪಕ್ ಎಸ್ ಪಿ ಮತ್ತು ಸಂಘಟನೆಯ ಮಾಜಿ ಅಧ್ಯಕ್ಷರುಗಳಾಗಿರುವ ಜೀತೆಂದ್ರ ಸುವರ್ಣ, ಮೋಹನ್ ಅತ್ತಾವರ್, ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯರು ಉದ್ಯಮಿಗಳಾದ ಸತೀಶ್ ಪೂಜಾರಿ ದುಬೈ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya
error: Content is protected !!