25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆ ಮರದಿಂದ ಅಡಿಕೆಕೊಂಡು ಹೋಗಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿಬಾಜೆ ಗ್ರಾಮದ ಎಲಿಯಮ್ಮ(67ವ) ಎಂಬವರು ಶಿಬಾಜೆ ಗ್ರಾಮದಲ್ಲಿರುವ ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ಸಿ.ಎಮ್.ಉಲಹನನ್ ಮತ್ತು ಸಿ.ಎಮ್.ರಾಜು ಎಂಬವರು ತೆಗೆದು ಹಾಕಿದ್ದಾರೆ. ಸದ್ರಿ ಜಾಗ ತಮ್ಮದೆಂದು ಹೇಳಿ ಜಮೀನಿನಲ್ಲಿದ್ದ ಅಡಿಕೆ ಮರದಿಂದ ಅಡಿಕೆಗಳನ್ನು ತೆಗೆಯುತ್ತಿದ್ದಾರೆ.
ನ.16ರಂದು ಬೆಳಿಗ್ಗೆ ಎಲಿಯಮ್ಮ ಅವರು ಜಾಗಕ್ಕೆ ಹೋದ ಸಮಯ ಆಪಾದಿತರು ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಾಗದಲ್ಲಿದ್ದ ಅಡಿಕೆ ಮರದಿಂದ ಬಿದ್ದ ಸುಮಾರು ಅರ್ಧ ಗೋಣಿ ಚೀಲದಷ್ಟು ಅಡಿಕೆಯನ್ನು ತೆಗೆದುಕೊಂಡು ಹೋಗುತ್ತಿದ್ದ ಬಗ್ಗೆ ವಿಚಾರಿಸಿದಾಗ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 90/2023ರಂತೆ ಕಲಂ 447, 506 ಜೊತೆಗೆ 34 ಐಪಿ ಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!