September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆ ಮರದಿಂದ ಅಡಿಕೆಕೊಂಡು ಹೋಗಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿಬಾಜೆ ಗ್ರಾಮದ ಎಲಿಯಮ್ಮ(67ವ) ಎಂಬವರು ಶಿಬಾಜೆ ಗ್ರಾಮದಲ್ಲಿರುವ ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ಸಿ.ಎಮ್.ಉಲಹನನ್ ಮತ್ತು ಸಿ.ಎಮ್.ರಾಜು ಎಂಬವರು ತೆಗೆದು ಹಾಕಿದ್ದಾರೆ. ಸದ್ರಿ ಜಾಗ ತಮ್ಮದೆಂದು ಹೇಳಿ ಜಮೀನಿನಲ್ಲಿದ್ದ ಅಡಿಕೆ ಮರದಿಂದ ಅಡಿಕೆಗಳನ್ನು ತೆಗೆಯುತ್ತಿದ್ದಾರೆ.
ನ.16ರಂದು ಬೆಳಿಗ್ಗೆ ಎಲಿಯಮ್ಮ ಅವರು ಜಾಗಕ್ಕೆ ಹೋದ ಸಮಯ ಆಪಾದಿತರು ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಾಗದಲ್ಲಿದ್ದ ಅಡಿಕೆ ಮರದಿಂದ ಬಿದ್ದ ಸುಮಾರು ಅರ್ಧ ಗೋಣಿ ಚೀಲದಷ್ಟು ಅಡಿಕೆಯನ್ನು ತೆಗೆದುಕೊಂಡು ಹೋಗುತ್ತಿದ್ದ ಬಗ್ಗೆ ವಿಚಾರಿಸಿದಾಗ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 90/2023ರಂತೆ ಕಲಂ 447, 506 ಜೊತೆಗೆ 34 ಐಪಿ ಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
error: Content is protected !!