37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನ.13 ರಂದು ಸಂಜೆ ನಡೆದಿತ್ತು. ಇದೀಗ ಕಡವೇ ಬೇಟೆಯಾಡಿದ ಇಬ್ಬರು ಆರೋಪಿಗಳ ಮೇಲೆ ನ.17 ರಂದು ವನ್ಯಜೀವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ಘಟನೆ ವಿವರ: ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿಯ ಗಿರೀಶ್ ಎಮ್.ಆರ್ ಎಂಬವರ ಮನೆಯಲ್ಲಿ ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ತಂಡ ನ.13 ರಂದು ಸಂಜೆ 5 ಗಂಟೆ ಸುಮಾರಿಗೆ ದಾಳಿ ಮಾಡಿದ್ದು ಈ ವೇಳೆ ಆರೋಪಿ ಗಿರೀಶ್.ಎಮ್.ಆರ್ ಮತ್ತು ಆರೋಪಿ ಬಿಜು ಎಂಬಾತ ಮಾಂಸ ಸಮೇತ ಹಿಡಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಮನೆ ಹಿಂಭಾಗದಲ್ಲಿ ಮಾಂಸ ಮಾಡಲು ಉಪಯೋಗಿಸಿದ್ದ ರಕ್ತಸಿಕ್ಕ ಒಂದು ಬುಟ್ಟಿ , ಗೋಣಿ ಚೀಲಗಳನ್ನು ಮಹಜರು ನಡೆಸಿದ ಬಳಿಕ ವಶಕ್ಕೆ ಪಡೆದುಕೊಂಡಿದ್ದರು. ಅರಣ್ಯ ಇಲಾಖೆಯ ತನಿಖೆ ಬಳಿಕ ನ.17 ರಂದು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2016 ರಲ್ಲಿ ಕಡವೆ ಕಾಡುಪ್ರಾಣಿ ಬೇಟೆಯಾಡಿ ಅರಣ್ಯ ಇಲಾಖೆ ಕೈಗೆ ಸಿಕ್ಕಿಬಿದ್ದು ಬಂದೂಕು ಅರಣ್ಯ ಇಲಾಖೆಯ ವಶದಲ್ಲಿದ್ದು. ಕೋರ್ಟ್ ನಲ್ಲಿ ತನಿಖೆಯಲ್ಲಿದೆ. ಇದೀಗ ಮತ್ತೆ ಎರಡನೇ ಪ್ರಕರಣ ದಾಖಲಾಗಿದೆ. ಇನ್ನೂ ಘಟನಾ ಸ್ಥಳದಲ್ಲಿ ರಕ್ತಸಿಕ್ಕವಾಗಿ ಪತ್ತೆಯಾಗಿದ್ದ ಬುಟ್ಟಿ ಹಾಗೂ ಗೋಣಿಚೀಲಗಳನ್ನು ಕಡವೆ ಕಾಡುಪ್ರಾಣಿಯಾದ್ದು ಎಂಬ ಖಚಿತ ಪಡಿಸಲು ಪರೀಕ್ಷೆಗಾಗಿ ಹೈದರಾಬಾದ್ ಗೆ ಕಳುಹಿಸಿಕೊಡಲಿದ್ದಾರೆ ಬೆಳ್ತಂಗಡಿ ಅರಣ್ಯಾಧಿಕಾರಿಗಳು ಎಂದು ಮಾಹಿತಿ ತಿಳಿದುಬಂದಿದೆ.

Related posts

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya
error: Content is protected !!