September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನ.13 ರಂದು ಸಂಜೆ ನಡೆದಿತ್ತು. ಇದೀಗ ಕಡವೇ ಬೇಟೆಯಾಡಿದ ಇಬ್ಬರು ಆರೋಪಿಗಳ ಮೇಲೆ ನ.17 ರಂದು ವನ್ಯಜೀವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ಘಟನೆ ವಿವರ: ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿಯ ಗಿರೀಶ್ ಎಮ್.ಆರ್ ಎಂಬವರ ಮನೆಯಲ್ಲಿ ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ತಂಡ ನ.13 ರಂದು ಸಂಜೆ 5 ಗಂಟೆ ಸುಮಾರಿಗೆ ದಾಳಿ ಮಾಡಿದ್ದು ಈ ವೇಳೆ ಆರೋಪಿ ಗಿರೀಶ್.ಎಮ್.ಆರ್ ಮತ್ತು ಆರೋಪಿ ಬಿಜು ಎಂಬಾತ ಮಾಂಸ ಸಮೇತ ಹಿಡಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಮನೆ ಹಿಂಭಾಗದಲ್ಲಿ ಮಾಂಸ ಮಾಡಲು ಉಪಯೋಗಿಸಿದ್ದ ರಕ್ತಸಿಕ್ಕ ಒಂದು ಬುಟ್ಟಿ , ಗೋಣಿ ಚೀಲಗಳನ್ನು ಮಹಜರು ನಡೆಸಿದ ಬಳಿಕ ವಶಕ್ಕೆ ಪಡೆದುಕೊಂಡಿದ್ದರು. ಅರಣ್ಯ ಇಲಾಖೆಯ ತನಿಖೆ ಬಳಿಕ ನ.17 ರಂದು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2016 ರಲ್ಲಿ ಕಡವೆ ಕಾಡುಪ್ರಾಣಿ ಬೇಟೆಯಾಡಿ ಅರಣ್ಯ ಇಲಾಖೆ ಕೈಗೆ ಸಿಕ್ಕಿಬಿದ್ದು ಬಂದೂಕು ಅರಣ್ಯ ಇಲಾಖೆಯ ವಶದಲ್ಲಿದ್ದು. ಕೋರ್ಟ್ ನಲ್ಲಿ ತನಿಖೆಯಲ್ಲಿದೆ. ಇದೀಗ ಮತ್ತೆ ಎರಡನೇ ಪ್ರಕರಣ ದಾಖಲಾಗಿದೆ. ಇನ್ನೂ ಘಟನಾ ಸ್ಥಳದಲ್ಲಿ ರಕ್ತಸಿಕ್ಕವಾಗಿ ಪತ್ತೆಯಾಗಿದ್ದ ಬುಟ್ಟಿ ಹಾಗೂ ಗೋಣಿಚೀಲಗಳನ್ನು ಕಡವೆ ಕಾಡುಪ್ರಾಣಿಯಾದ್ದು ಎಂಬ ಖಚಿತ ಪಡಿಸಲು ಪರೀಕ್ಷೆಗಾಗಿ ಹೈದರಾಬಾದ್ ಗೆ ಕಳುಹಿಸಿಕೊಡಲಿದ್ದಾರೆ ಬೆಳ್ತಂಗಡಿ ಅರಣ್ಯಾಧಿಕಾರಿಗಳು ಎಂದು ಮಾಹಿತಿ ತಿಳಿದುಬಂದಿದೆ.

Related posts

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya
error: Content is protected !!