23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಕರ್ನಾಟಕ ಪ್ರಾಂತೀಯ ಸಮಾಜ ಸೇವಾ ಸಂಸ್ಥೆ ಬೆಂಗಳೂರು ಮತ್ತು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನ.16 ಮತ್ತು 17 ರಂದು ಡಿ. ಕೆ. ಆರ್. ಡಿ. ಎಸ್ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೆಸ್ ಚಾಕೊ ಇವರು ನೆರವೇರಿಸಿ ಶುಭ ಹಾರೈಸಿದರು.
ಅಥಿತಿಗಳಾಗಿ ಕ್ರಾಸ್ ಸಂಸ್ಥೆಯ ರಾಜ್ಯ ಸಂಯೋಜಕಿ ಸಿಸ್ಟರ್ ನ್ಯಾನ್ಸಿ ಲೋಬೊ ಹಾಗೂ ವಂದನೀಯ ಫಾದರ್ ತೋಮಸ್ ಪುಲ್ಲಾಟ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಂದನೀಯ ಫಾದರ್ ಡಾl ಸಲೀನ್ ಜೋಸೆಫ್ ರವರು ಸಾಂವಿಧಾನಿಕ ಹಕ್ಕುಗಳ ಬಗ್ಗೆ ತರಬೇತಿ ನೀಡಿದರು.
ಡಿ.ಕೆ.ಆರ್. ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂದನೀಯ ಫಾದರ್ ಬಿನೋಯಿ ಎ. ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕರ್ತ ಮಾರ್ಕ್ ಡಿ ಸೋಜರವರು ಸ್ವಾಗತಿಸಿದರು. ಸುಶೀಲಾ ರವರು ವಂದಿಸಿದರು. ಯೋಜನಾ ಸಂಯೋಜಕಿ ಸಿಸಿಲ್ಯಾ ತಾವ್ರೋರವರು ಕಾರ್ಯಕ್ರಮ ನಿರೂಪಿಸಿದರು. ಡಿ.ಕೆ. ಆರ್. ಡಿ.ಎಸ್, ಸಿ. ಒ. ಡಿ.ಪಿ, ಕಿಡ್ಸ್ ಹಾಗೂ ಸಂಪದ ಸಂಸ್ಥೆಯ ಸಂಯೋಜಕರು. ಕಾರ್ಯಕರ್ತರು ಹಾಗೂ ಒಕ್ಕೂಟದ ಪ್ರತಿನಿಧಿಗಳು ಸೇರಿದಂತೆ 44 ಮಂದಿ ಭಾಗಹಿಸಿದ್ದರು.

Related posts

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya
error: Content is protected !!