25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಕರ್ನಾಟಕ ಪ್ರಾಂತೀಯ ಸಮಾಜ ಸೇವಾ ಸಂಸ್ಥೆ ಬೆಂಗಳೂರು ಮತ್ತು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನ.16 ಮತ್ತು 17 ರಂದು ಡಿ. ಕೆ. ಆರ್. ಡಿ. ಎಸ್ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೆಸ್ ಚಾಕೊ ಇವರು ನೆರವೇರಿಸಿ ಶುಭ ಹಾರೈಸಿದರು.
ಅಥಿತಿಗಳಾಗಿ ಕ್ರಾಸ್ ಸಂಸ್ಥೆಯ ರಾಜ್ಯ ಸಂಯೋಜಕಿ ಸಿಸ್ಟರ್ ನ್ಯಾನ್ಸಿ ಲೋಬೊ ಹಾಗೂ ವಂದನೀಯ ಫಾದರ್ ತೋಮಸ್ ಪುಲ್ಲಾಟ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಂದನೀಯ ಫಾದರ್ ಡಾl ಸಲೀನ್ ಜೋಸೆಫ್ ರವರು ಸಾಂವಿಧಾನಿಕ ಹಕ್ಕುಗಳ ಬಗ್ಗೆ ತರಬೇತಿ ನೀಡಿದರು.
ಡಿ.ಕೆ.ಆರ್. ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂದನೀಯ ಫಾದರ್ ಬಿನೋಯಿ ಎ. ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕರ್ತ ಮಾರ್ಕ್ ಡಿ ಸೋಜರವರು ಸ್ವಾಗತಿಸಿದರು. ಸುಶೀಲಾ ರವರು ವಂದಿಸಿದರು. ಯೋಜನಾ ಸಂಯೋಜಕಿ ಸಿಸಿಲ್ಯಾ ತಾವ್ರೋರವರು ಕಾರ್ಯಕ್ರಮ ನಿರೂಪಿಸಿದರು. ಡಿ.ಕೆ. ಆರ್. ಡಿ.ಎಸ್, ಸಿ. ಒ. ಡಿ.ಪಿ, ಕಿಡ್ಸ್ ಹಾಗೂ ಸಂಪದ ಸಂಸ್ಥೆಯ ಸಂಯೋಜಕರು. ಕಾರ್ಯಕರ್ತರು ಹಾಗೂ ಒಕ್ಕೂಟದ ಪ್ರತಿನಿಧಿಗಳು ಸೇರಿದಂತೆ 44 ಮಂದಿ ಭಾಗಹಿಸಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya
error: Content is protected !!