25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ : ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ,(ರಿ). ನಿಡ್ಲೆ ಗ್ರಾಮ ಪಂಚಾಯತ್ ಇದರ ವಾರ್ಷಿಕ ಮಹಾಸಭೆಯು ನ.18 ರಂದು ಬರಂಗಾಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ದೀಪ ಬೆಳಗಿಸುವ ಮುಖೇನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯಲ್ಲಿ ವರದಿ ಮಂಡನೆ ಜಮಾ ಖರ್ಚು ಆಡಿಟ್ ವರದಿ ಮಂಡನೆ ಮಾಡಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ ಸಂಜೀವಿನಿಯ ಬಗ್ಗೆ ಸವಿಸ್ತರವಾಗಿ ಮಾತನಾಡಿದರು ಹಾಗೂ ವಲಯ ಮೇಲ್ವಿಚಾರಕರಾದ ವೀಣಾಶ್ರೀ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ನಡೆಸಿದರು ಹಾಗೂ ಒಕ್ಕೂಟ ರಚನೆಯ ಬಗ್ಗೆ ತಿಳಿಸಿದರು.

ನೂತನ ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮ, ಕಾರ್ಯದರ್ಶಿಯಾಗಿ ಜಯಶ್ರೀ, ಉಪಾಧ್ಯಕ್ಷರಾಗಿ ಪೂರ್ಣಿಮಾ
ಜತೆ ಕಾರ್ಯದರ್ಶಿಯಾಗಿ ಚಂದ್ರಕಲಾ, ಕೋಶಧಿಕಾರಿಯಾಗಿ ಹೇಮಲತಾ, ಸದಸ್ಯರಾಗಿ ಪುಷ್ಪಲತಾ, ವನಿತಾ, ಸೌಮ್ಯ, ಪ್ರೇಮ ರವರು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಶ್ರೀಮತಿ ಹೇಮಾವತಿ ನಿರೂಪಿಸಿದರು. ಸುಮನಾ ಸ್ವಾಗತಿಸಿ, ಸುಜಾತ ಧನ್ಯವಾದವಿತ್ತರು. ಎಮ್.ಬಿ.ಕೆ ಭವಾನಿ ವರದಿಯನ್ನು ಮಂಡಿಸಿದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!