25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಿಡ್ಲೆ : ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ,(ರಿ). ನಿಡ್ಲೆ ಗ್ರಾಮ ಪಂಚಾಯತ್ ಇದರ ವಾರ್ಷಿಕ ಮಹಾಸಭೆಯು ನ.18 ರಂದು ಬರಂಗಾಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ದೀಪ ಬೆಳಗಿಸುವ ಮುಖೇನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯಲ್ಲಿ ವರದಿ ಮಂಡನೆ ಜಮಾ ಖರ್ಚು ಆಡಿಟ್ ವರದಿ ಮಂಡನೆ ಮಾಡಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ ಸಂಜೀವಿನಿಯ ಬಗ್ಗೆ ಸವಿಸ್ತರವಾಗಿ ಮಾತನಾಡಿದರು ಹಾಗೂ ವಲಯ ಮೇಲ್ವಿಚಾರಕರಾದ ವೀಣಾಶ್ರೀ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ನಡೆಸಿದರು ಹಾಗೂ ಒಕ್ಕೂಟ ರಚನೆಯ ಬಗ್ಗೆ ತಿಳಿಸಿದರು.

ನೂತನ ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮ, ಕಾರ್ಯದರ್ಶಿಯಾಗಿ ಜಯಶ್ರೀ, ಉಪಾಧ್ಯಕ್ಷರಾಗಿ ಪೂರ್ಣಿಮಾ
ಜತೆ ಕಾರ್ಯದರ್ಶಿಯಾಗಿ ಚಂದ್ರಕಲಾ, ಕೋಶಧಿಕಾರಿಯಾಗಿ ಹೇಮಲತಾ, ಸದಸ್ಯರಾಗಿ ಪುಷ್ಪಲತಾ, ವನಿತಾ, ಸೌಮ್ಯ, ಪ್ರೇಮ ರವರು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಶ್ರೀಮತಿ ಹೇಮಾವತಿ ನಿರೂಪಿಸಿದರು. ಸುಮನಾ ಸ್ವಾಗತಿಸಿ, ಸುಜಾತ ಧನ್ಯವಾದವಿತ್ತರು. ಎಮ್.ಬಿ.ಕೆ ಭವಾನಿ ವರದಿಯನ್ನು ಮಂಡಿಸಿದರು.

Related posts

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!