26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

ಬೆಳ್ತಂಗಡಿ: ಉಜಿರೆ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ನಿರ್ಮಿಸಲು ಉದ್ದೇಶಿಸಲಾದ ವಿದ್ಯುತ್ ಉಪಕೇಂದ್ರಕ್ಕೆ 0.96 ಎಕ್ರೆ ಜಾಗವನ್ನು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ(ಮೆಸ್ಕಾಂ) ಇವರಿಗೆ ಮಂಜೂರುಗೊಳಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.


ಉಜಿರೆ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ 33/11 ಕೆ.ವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಈಗಾಗಲೇ ಮೆಸ್ಕಾಂ ಯೋಜನೆ ರೂಪಿಸಿ ಸರಕಾರಕ್ಕೆ ಕಳುಹಿಸಿದ್ದು, ಇದಕ್ಕೆ ಸರಕಾರದಿಂದ ಈಗಾಗಲೇ ಮಂಜೂರಾತಿ ದೊರಕಿದೆ. ಅಲ್ಲದೆ ಉಪಕೇಂದ್ರಕ್ಕೆ ಉಜಿರೆ ಗ್ರಾಮದ ಸರ್ವೆ ನಂಬ್ರ 393/3ರಲ್ಲಿ 0.96 ಎಕ್ರೆ ಜಮೀನು ಮಂಜೂರಾತಿಗೆ ಮೆಸ್ಕಾಂ ಇಲಾಖೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಮೆಸ್ಕಾಂ ಪ್ರಸ್ತಾವನೆಯಿಂದ ಇದೀಗ ಜಿಲ್ಲಾಧಿಕಾರಿಗಳು ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗವನ್ನು ಮಂಜೂರುಗೊಳಿಸಿ ಆದೇಶ ನೀಡಿದ್ದಾರೆ.


ಸ್ಥಳ ಮೌಲ್ಯ ಪಾವತಿಗೆ ಸೂಚನೆ:
ಸರಕಾರದಿಂದ ಇಲಾಖೆಗೆ ಮಂಜೂರಾದ 0.96 ಎಕ್ರೆ ಜಾಗಕ್ಕೆ ಸ್ಥಳ ಮೌಲ್ಯ ಮತ್ತು ಇತರ ಶುಲ್ಕವನ್ನು ಪಾವತಿಸಲು ಆದೇಶದಲ್ಲಿ ತಿಳಿಸಲಾಗಿದೆ. ಸ್ಥಳ ಮೌಲ್ಯ ರೂ.46,66,732 ಹಾಗೂ ಭೂ ಪರಿವರ್ತನೆ ಶುಲ್ಕ ರೂ.20,928ಮತ್ತು ಅಳತೆ ಶುಲ್ಕ ರೂ.55 ಸೇರಿದಂತೆ ಒಟ್ಟು ರೂ.46,87,715 ಒಂದು ತಿಂಗಳ ಒಳಗೆ ಪಾವತಿಸುಂತೆ ಆದೇಶದಲ್ಲಿ ತಿಳಿಸಲಾಗಿದೆ.
ಇದರಿಂದಾಗಿ ಉಜಿರೆ ಗ್ರಾಮದ ನಿನ್ನಿಕಲ್ಲಿನಲ್ಲಿ 33/11 ಕೆ.ವಿ ವಿದ್ಯುತ್ ಉಪಕೇಂದ್ರ ಶೀಘ್ರವಾಗಿ ನಿರ್ಮಾಣ ಕಾರ್ಯ ಆರಂಭವಾಗಲಿದ್ದು, ಈ ಫೀಡರ್‌ಗೆ 10 ಎಂವಿಎ ಸಾಮರ್ಥ್ಯದ ಶಕ್ತಿ ಪರಿವರ್ತಕ ಅಳವಡಿಸಲಾಗುತ್ತದೆ. ಈ ಉಪಕೇಂದ್ರ ಆರಂಭವಾದರೆ ಬೆಳಾಲು ಮತ್ತು ಉಜಿರೆ ಗ್ರಾಮದ ಸುಮಾರು 25 ಸಾವಿರ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ. ಈಗ ಉಜಿರೆ ಮತ್ತು ಬೆಳಾಲು ಗ್ರಾಮದಲ್ಲಿ ಎರಡು ಮಾತ್ರ ವಿದ್ಯುತ್ ಫೀಡರ್‌ಗಳಿವೆ. ನೂತನ ಉಪಕೇಂದ್ರ ಆರಂಭವಾದ ಬಳಿಕ ವಿದ್ಯುತ್ ಫೀಡರ್‌ಗಳ ಸಂಖ್ಯೆಯನ್ನು ಆರಕ್ಕೆ ಏರಿಸಲಾಗುತ್ತದೆ. ಈಗ ಬೆಳಾಲು, ಉಜಿರೆಗೆ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುತ್ತಿರುವುದರಿಂದ ಇಲ್ಲಿಬೇಸಿಗೆ ಕಾಲದಲ್ಲಿ ಲೋವೋಲ್ಟೇಜ್ ಸಮಸ್ಯೆಯಿದ್ದು, ಇದು ನಿವಾರಣೆಯಾಗಲಿದೆ.

Related posts

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಮಾರುತಿ ಸುಜುಕಿ ಶೋರೂಮ್ ನಲ್ಲಿ ನ್ಯೂ ಬ್ರೆಝಾ ಮಾರುಕಟ್ಟೆಗೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆ

Suddi Udaya

ಆ.29: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
error: Content is protected !!