22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

ವೇಣೂರು:ಸುಂಮಗಲಿ ಶ್ರೀ ಸೌಭಾಗ್ಯ ಸನಾತನ ಹಿಂದು ಧರ್ಮದ ಹೆಣ್ಣು ಮಕ್ಕಳ ಭಾಗ್ಯೋದಯದ ಬೆಳಕು ಮೂಗುತಿ ಧಾರಣೆ ಆಗದ ತಾಲ್ಲೂಕಿನ 9 ರಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣ ಕಾರ್ಯಕ್ರಮವು ವೇಣೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ನಡೆಯಿತು‌.ಬೆಳ್ತಂಗಡಿ ತಾಲೂಕಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ 300 ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ನಡೆಯಿತು.ತಾಲೂಕಿನ ವಿವಿಧ ಕಡೆಯಿಂದ 9 ರಿಂದ 19 ವರ್ಷದೊಳಗಿನ ಹೆಣ್ಣು ಮಕ್ಕಳು ಆಗಮಿಸಿ ಮೂಗುತಿ ಧಾರಣೆಗೆ ಸಹಕರಿಸಿದರು.ದ.ಕ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭಾರತದ ಆತ್ಮ ಹಿಂದುತ್ವ,ನಂಬಿಕೆ ಮತ್ತು ಭಾವನೆಗಳ ಮೇಲೆ ಹಿಂದೂ ಸಮಾಜ ನಿಂತಿದೆ ಎಂದರು.ಶಂಕರಪುರ ಏಕಜಾತಿ ಧರ್ಮ ಪೀಠ,ಧ್ವರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಮೂಗುತಿಗೆ ವಿಶೇಷ ಮಹತ್ವವಿದೆ ಎಂದರು.

ವೇದಿಕೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಎನ್ ಪುರುಷೋತ್ತಮ ರಾವ್, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಇ,ಮೀನಾಕ್ಷಿ, ವೇಣೂರು ಸತೀಶ್ ಮಡಿವಾಳ, ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ 6 ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

Related posts

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya
error: Content is protected !!