25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ನ.19 ರಂದು ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿತು.

ಜನಜಾಗೃತಿ ತಾಲೂಕು ಸಮಿತಿ ಸದಸ್ಯರಾದ ಹರೀಶ್ ಕುಮಾರ್ ಪೊಕ್ಕಿ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು. ಹೊಸಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ವೀಣಾರವರು ಶೌರ್ಯ ವಿಪತ್ತು ತಂಡದ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.

ವಲಯ ವಿಪತ್ತು ಘಟಕದ‌ ಸಂಚಾಲಕರಾಗಿ ಪ್ರವೀಣ್ ನೇರಳ್ ಪಲ್ಕೆ ಯವರನ್ನು ಆಯ್ಕೆ ಮಾಡಲಾಯಿತು. ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಉಪಾಧ್ಯಕ್ಷರಾದ ಗುಣಪಾಲ ಪೂಜಾರಿ ನೇರಳ್ ಪಲ್ಕೆ, ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸಂಗೀತಾ ಹಾಗೂ ಹೊಸಂಗಡಿ ವಲಯದ ಶೌರ್ಯ ‌ವಿಪತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.

ಆರಂಬೋಡಿ ಸೇವಾ ಪ್ರತಿನಿಧಿ ಶ್ರೀಮತಿ ಮಮತಾ ರವರು ಸ್ವಾಗತಿಸಿ. ಹರೀಶ್ಆಚಾರ್ಯ ವಂದಿಸಿ. ಗುಂಡೂರಿ ಸೇವಾ ಪ್ರತಿನಿಧಿ ಹರೀಶ್ ಬಾಡಾರು ನಿರೂಪಿಸಿದರು.

Related posts

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನದ ಧಮಾಕ

Suddi Udaya
error: Content is protected !!