ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಆವರಣದಲ್ಲಿ ನೆಲೆನಿಂತ ಕಾರಣೀಕ ಬೊಳ್ಳಜ್ಜನ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರವನ್ನು ಅನಾವರಣಗೊಳಿಸಲಾಯಿತು.

ಪ್ರಸಿದ್ದ ದೈವ ನರ್ತಕ ಬೇಬಿ ಪರವ ಅವರು ಸ್ವಾಮಿ ಬೊಳ್ಳಜ್ಜ ಹೆಸರಿನಲ್ಲಿ ಕ್ರೀಡಾಕೂಟಕ್ಕೆ ಸಮವಸ್ತ್ರ ಮಾಡಿದ್ದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ, ಸುದ್ದಿ ಉದಯ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಬಳಂಜ ಗ್ರಾಮ‌ ಪಂಚಾಯತ್ ಸದಸ್ಯ ಬಾಲಕೃಷ್ಣ ಪೂಜಾರಿ ಯೈಕುರಿ, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ, ಬೊಂಟ್ರೋಟ್ಟು ಕ್ಷೇತ್ರದ ಟ್ರಸ್ಟಿ ಗಣೇಶ್ ಪೂಜಾರಿ, ಯುವಶಕ್ತಿ ಫ್ರೆಂಡ್ಸ್ ತಂಡದ ಸದಸ್ಯ ಕರುಣಾಕರ ಹೆಗ್ಡೆ ಬೊಕ್ಕಸ, ದೈವ ನರ್ತಕ ಬೇಬಿ ಪರವ, ಸುದ್ದಿ ಉದಯ ವಾರಪತ್ರಿಕೆಯ ಪ್ರತಿನಿಧಿ ಅಶೋಕ್ ಕುಲಾಲ್, ಪ್ರಮುಖರಾದ ಜಯನ್ ಮೇಸ್ತ್ರಿ, ರಾಕೇಶ್ ಹಿಮರಡ್ಡ,ಅನಿಲ್ ಬೊಂಟ್ರೋಟ್ಟು ಮೊದಲಾದವರು ಉಪಸ್ಥಿತರಿದ್ದರು.

Leave a Comment

error: Content is protected !!