32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

ಬೆಳ್ತಂಗಡಿ: ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಈಗಾಗಲೇ ತಾಲೂಕಿನಲ್ಲಿರುವ ಶತಾಯುಷಿ ಮತದಾರರನ್ನು ಸ್ಥಳೀಯ ಗ್ರಾಮ ಪಂಚಾಯತ್ ಮೂಲಕ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ ಅವರಿಗೆ ಪ್ರಮಾಣ ಪತ್ರವನ್ನು ನೀಡುವ ಕಾರ್ಯ ಆರಂಭಗೊಂಡಿದೆ.


ಅದರಂತೆ ನ.20 ರಂದು ಇಳಂತಿಲ ಗ್ರಾಮ ಪಂಚಾಯತು ವ್ಯಾಪ್ತಿಯ ಜೋಗಿಬೆಟ್ಟು ಎಂಬಲ್ಲಿರುವ ಖತಿಜ ಎಂಬವರ ಮನೆಗೆ ಇಳಂತಿಲ ಗ್ರಾಮ ಪಂಚಾಯತದವರು ಭೇಟಿ ನೀಡಿದಾಗ ಖತಿಜ ಅವರ 102ನೇ ಹುಟ್ಟು ಹಬ್ಬದ ದಿನವಾಗಿತ್ತು. ಹುಟ್ಟು ಹಬ್ಬ ಆಚರಿಸುವುದರ ಮೂಲಕ ಶತಾಯುಷಿ ಖತಿಜ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ, ಪ್ರಮಾಣ ಪತ್ರವನ್ನು ನೀಡಲಾಯಿತು.

Related posts

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya
error: Content is protected !!