24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

ಬೆಳ್ತಂಗಡಿ: ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಈಗಾಗಲೇ ತಾಲೂಕಿನಲ್ಲಿರುವ ಶತಾಯುಷಿ ಮತದಾರರನ್ನು ಸ್ಥಳೀಯ ಗ್ರಾಮ ಪಂಚಾಯತ್ ಮೂಲಕ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ ಅವರಿಗೆ ಪ್ರಮಾಣ ಪತ್ರವನ್ನು ನೀಡುವ ಕಾರ್ಯ ಆರಂಭಗೊಂಡಿದೆ.


ಅದರಂತೆ ನ.20 ರಂದು ಇಳಂತಿಲ ಗ್ರಾಮ ಪಂಚಾಯತು ವ್ಯಾಪ್ತಿಯ ಜೋಗಿಬೆಟ್ಟು ಎಂಬಲ್ಲಿರುವ ಖತಿಜ ಎಂಬವರ ಮನೆಗೆ ಇಳಂತಿಲ ಗ್ರಾಮ ಪಂಚಾಯತದವರು ಭೇಟಿ ನೀಡಿದಾಗ ಖತಿಜ ಅವರ 102ನೇ ಹುಟ್ಟು ಹಬ್ಬದ ದಿನವಾಗಿತ್ತು. ಹುಟ್ಟು ಹಬ್ಬ ಆಚರಿಸುವುದರ ಮೂಲಕ ಶತಾಯುಷಿ ಖತಿಜ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ, ಪ್ರಮಾಣ ಪತ್ರವನ್ನು ನೀಡಲಾಯಿತು.

Related posts

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!