July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

ಬೆಳ್ತಂಗಡಿ: ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಈಗಾಗಲೇ ತಾಲೂಕಿನಲ್ಲಿರುವ ಶತಾಯುಷಿ ಮತದಾರರನ್ನು ಸ್ಥಳೀಯ ಗ್ರಾಮ ಪಂಚಾಯತ್ ಮೂಲಕ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ ಅವರಿಗೆ ಪ್ರಮಾಣ ಪತ್ರವನ್ನು ನೀಡುವ ಕಾರ್ಯ ಆರಂಭಗೊಂಡಿದೆ.


ಅದರಂತೆ ನ.20 ರಂದು ಇಳಂತಿಲ ಗ್ರಾಮ ಪಂಚಾಯತು ವ್ಯಾಪ್ತಿಯ ಜೋಗಿಬೆಟ್ಟು ಎಂಬಲ್ಲಿರುವ ಖತಿಜ ಎಂಬವರ ಮನೆಗೆ ಇಳಂತಿಲ ಗ್ರಾಮ ಪಂಚಾಯತದವರು ಭೇಟಿ ನೀಡಿದಾಗ ಖತಿಜ ಅವರ 102ನೇ ಹುಟ್ಟು ಹಬ್ಬದ ದಿನವಾಗಿತ್ತು. ಹುಟ್ಟು ಹಬ್ಬ ಆಚರಿಸುವುದರ ಮೂಲಕ ಶತಾಯುಷಿ ಖತಿಜ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ, ಪ್ರಮಾಣ ಪತ್ರವನ್ನು ನೀಡಲಾಯಿತು.

Related posts

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!