23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

ಬೆಳ್ತಂಗಡಿ: ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಈಗಾಗಲೇ ತಾಲೂಕಿನಲ್ಲಿರುವ ಶತಾಯುಷಿ ಮತದಾರರನ್ನು ಸ್ಥಳೀಯ ಗ್ರಾಮ ಪಂಚಾಯತ್ ಮೂಲಕ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ ಅವರಿಗೆ ಪ್ರಮಾಣ ಪತ್ರವನ್ನು ನೀಡುವ ಕಾರ್ಯ ಆರಂಭಗೊಂಡಿದೆ.


ಅದರಂತೆ ನ.20 ರಂದು ಇಳಂತಿಲ ಗ್ರಾಮ ಪಂಚಾಯತು ವ್ಯಾಪ್ತಿಯ ಜೋಗಿಬೆಟ್ಟು ಎಂಬಲ್ಲಿರುವ ಖತಿಜ ಎಂಬವರ ಮನೆಗೆ ಇಳಂತಿಲ ಗ್ರಾಮ ಪಂಚಾಯತದವರು ಭೇಟಿ ನೀಡಿದಾಗ ಖತಿಜ ಅವರ 102ನೇ ಹುಟ್ಟು ಹಬ್ಬದ ದಿನವಾಗಿತ್ತು. ಹುಟ್ಟು ಹಬ್ಬ ಆಚರಿಸುವುದರ ಮೂಲಕ ಶತಾಯುಷಿ ಖತಿಜ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ, ಪ್ರಮಾಣ ಪತ್ರವನ್ನು ನೀಡಲಾಯಿತು.

Related posts

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!