23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ಈ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ವೈಭವದ ಅಂಗವಾಗಿ ” ಕ್ರೀಡಾ ಕಲರವ 2023 ” ವಿವಿದ ಪಂದ್ಯಾಟಗಳು ಹಾಗೂ ಕ್ರೀಡಾಕೂಟಗಳು ನಡೆಯಿತು . ಕ್ರೀಡಾ ಕೂಟವನ್ನು ಶಾಲಾ ಆಡಳಿತ ಸಮಿತಿಯ ಅದ್ಯಕ್ಷ ರಾಜು ಪೂಜಾರಿ ಧ್ವಜಾರೋಹಣವನ್ನು ಹಾಗೂ ಅಳದಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅದ್ಯಕ್ಷ ಶಿವು ಭಟ್ ಕಟ್ಟೂರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಗೌರವಾದ್ಯಕ್ಷ ಗಣೇಶ್ ಹೆಗ್ಡೆ, ಶಾಲಾ ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿ ನಾರಾಯಣ ಪೂಜಾರಿ , ವಾಣಿ ಆಂಗ್ಲ ಮಾದ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಹರೀಶ್ , ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ ಅದ್ಯಕ್ಷರಾದ ವಸಂತ ಪೂಜಾರಿ, ಲಯನ್ಸ್ ಕ್ಲಬ್ ಸುಲ್ಕೇರಿ ಇದರ ಸ್ಥಾಪಕಾದ್ಯಕ್ಷರಾದ ಸುಂದರ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಅದ್ಯಕ್ಷರಾದ ಸಂದೀಪ್ ಶೆಟ್ಟಿ ಉಪಸ್ಥಿತಿತರಿದ್ದರು.

ಶ್ರೀ ರಾಮ ಪ್ರೌಢಶಾಲಾ ಮುಖ್ಯೋಪಾದ್ಯಾಯರಾದ ಪ್ರಮೋದ್ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಲಾ ಇವರು ಧನ್ಯವಾದವಿತ್ತರು. ಶಿಕ್ಷಕಿ ರಮ್ಯಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್, ಸುಲ್ಕೇರಿ ಸದಸ್ಯರು ಕ್ರೀಡಾ ಕೂಟದ ಯಶಸ್ಸಿಗೆ ಸಹಕಾರ ನೀಡಿದರು

Related posts

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya
error: Content is protected !!