25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ


ಧರ್ಮಸ್ಥಳ : “ಜ್ಞಾನವೆಂಬುದು ಡಬ್ಬದಲ್ಲಿರುವ ಬಣ್ಣದಂತೆ. ಅದನ್ನು ಗೋಡೆಗೆ ಬಳಿದಾಗಲೇ ಅದರ ಮಹತ್ವ ತಿಳಿಯುವುದು. ಡಬ್ಬದಲ್ಲೇ ಇದ್ದರೆ ಅದರಿಂದ ಏನು ಪ್ರಯೋಜನವಿಲ್ಲ. ನಮ್ಮ ಜ್ಞಾನದಿಂದ ನಮ್ಮ ಸುತ್ತಲಿನ ಪ್ರದೇಶದಲ್ಲಿ ವಿವೇಕವೆಂಬ ಬಣ್ಣವನ್ನ ಬಳಿದಾಗ ಬದುಕು ಸಾರ್ಥಕತೆಯನ್ನು ಕಾಣುತ್ತದೆ. ಅಧ್ಯಾಪಕರು ಹೃದಯದಿಂದ ಹೃದಯಕ್ಕೆ ಸಂಧಿಸಿ ಪಾಠದ ಅಧ್ಯಯನ, ಅಧ್ಯಾಪನವನ್ನು ಮಾಡಬೇಕು. ಅವರ ನಿರಂತರ ಅಧ್ಯಯನ ಶೀಲತೆ ಅವರನ್ನು ಒಬ್ಬ ಯಶಸ್ವಿ ಅಧ್ಯಾಪಕನನ್ನಾಗಿ ಮಾಡಬಹುದು. ಅಧ್ಯಾಪಕರು ಹೊಸತನಕ್ಕೆ, ನಾವಿನ್ಯತೆಗೆ ತಮ್ಮನ್ನು ತಾವು ತೆರೆದುಕೊಂಡು, ಜ್ಞಾನದ ಹರಿವನ್ನು ವಿದ್ಯಾರ್ಥಿಗಳಲ್ಲಿ ವಿಸ್ತರಿಸುವ ಕಾರ್ಯವನ್ನು ಮಾಡಬೇಕು” ಎಂದು ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ ಇವರು ಹೇಳಿದರು.


ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ 9 ಮತ್ತು 10ನೇ ತರಗತಿಗಳ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಕಾರ್ಯಾಗಾರದ ರೂಪುರೇಷೆಯನ್ನು ನೀಡಿದರು. ಬೋಧನೆಯಲ್ಲಿ ಚಟುವಟಿಕೆ ಸಹಿತ ಬೋಧನೆಯ ಮಹತ್ವವನ್ನು ತಿಳಿಯಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಎನ್ ಪದ್ಮರಾಜ್ ಇವರು ತರಗತಿಯನ್ನು ಆಕರ್ಷಕಗೊಳಿಸಲು ಚಟುವಟಿಕೆ ಆಧಾರಿತ ತರಬೇತಿ ಕಾರ್ಯಕ್ರಮಗಳು ಅನಿವಾರ್ಯ ಮತ್ತು ಇಂದಿನ ದಿನದಲ್ಲಿ ಕೋಣೆಯೊಳಗಿನ ತರಗತಿ ವಿದ್ಯಾರ್ಥಿಗಳಿಗೆ ಆಕರ್ಷಕವಾಗಲು ಹೊಸತನ ಅನಿವಾರ್ಯ ಎಂದರು.

ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ಸುಮಾರು 30 ಶಿಕ್ಷಕರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡರು. ಆಂಗ್ಲ ಮಾಧ್ಯಮ ಧರ್ಮಸ್ಥಳದ ಶ್ರೀಮತಿ ದಿವ್ಯ ಕನ್ನಡ ಭಾಷೆಯಲ್ಲಿ ಮಾದರಿ ತರಗತಿಯನ್ನು ನೀಡಿದರು. ಶಾಲಾ ಶಿಕ್ಷಕರಾದ ಜಯರಾಮ ಮಯ್ಯ ಸ್ವಾಗತಿಸಿ, ವಿಕಾಸ್ ಆರಿಗಾ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಿಕ್ಷಕ ಯುವರಾಜ್ ನಿರೂಪಿಸಿದರು.

Related posts

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya
error: Content is protected !!